ರಾಜ್ಯ

ಸರಕು ಮತ್ತು ಸೇವೆಗಳ ತೆರಿಗೆಗೆ ತಿದ್ದುಪಡಿ ಮಂಡನೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಸಿಎಂ ಸಿದ್ದರಾಮಯ್ಯರವರ ಪರವಾಗಿ ಕಂದಾಯ ಸಚಿವ ಕೃಷ ಬೈರೇಗೌಡ ಅವರು ಇಂದು ಸುವರ್ಣಸೌಧದಲ್ಲಿ 2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೇ ವಿಧೇಯಕವನ್ನು ಮಂಡಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು ನಡೆದ ಅಧೀವೇಶನದಲ್ಲಿ ತೆರಿಗೆ ಪಾವತಿದಾರರು ಮತ್ತು ತೆರಿಗೆ ಅಧಿಕಾರಿಗಳ ಮಧ್ಯೆ ಇರುವ ಗೊಂದಲಗಳನ್ನು ನಿವಾರಿಸಿ, ಒನ್‌ಟೈಮ್‌ ಸೆಟಲ್‌ಮೆಂಟ್‌ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ 2ನೇ ತಿದ್ದುಪಡಿ ತರುವ ಮೂಲಕ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಈ ಕುರಿತು ಇಂದು(ಡಿಸೆಂಬರ್‌.16) ವಿಧೇಯಕ ಮಂಡಿಸಿದ ಕೃಷ್ಣ ಬೈರೇಗೌಡ ಮಾತನಾಡಿ, ತೆರಿಗೆ ಪಾವತಿದಾರರು ಮತ್ತು ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವೆ ಗೊಂದಲಕ್ಕೆ ತೆರೆ ಎಳೆಯುವ ಮೂಲಕ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕ್ಕೆ 2ನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ತಿದ್ದುಪಡಿಯ ಪ್ರಮುಖ ಉದ್ದೇಶವೆಂದರೆ ಎಲ್ಲೆಲಲ್ಲಿ ತೆರಿಗೆದಾರರು ಮತ್ತು ತೆರಿಗೆ ಅಧಿಕಾರಿಗಳ ಮಧ್ಯೆ ಗೊಂದಲಗಳಿರುವ ಬಗ್ಗೆ ತೆರೆ ಎಳೆದು ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದಾಗಿದೆ. ಅಲ್ಲದೇ ಹಿಂದಿನಿಂದಲೂ ಮದ್ಯ ಮಾಡಲು ಉಪಯೋಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಧ್ಯೆ ತಕರಾರರು ಇದೆ. ಅದರೆ ಇದೀಗ ಸ್ಪರಿಟ್‌ ರಾಜ್ಯ ಸರ್ಕಾರಕ್ಕರ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಸ್ಪಿರಿಟ್‌ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

2 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

2 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

2 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago