ರಾಜ್ಯ

ಪೋಷಕರು, ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್‌ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್.‌12) ವಿಧಾನ ಪರಿಷತ್‌ ಸದಸ್ಯರಾದ ಬಲ್ಕೀಸ್‌ ಬಾನು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ 2007 ರಲ್ಲಿ ಪೋಷಕರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ, ಅಂತೆಯೇ ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‌ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಇಲ್ಲವಾದರೆ ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಅದು ಆಗದಿದ್ದಲ್ಲಿ ಹಿರಿಯ ನಾಗರಿಕರು ಸೆಕ್ಷನ್ 9ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ತಂದೆ ಮತ್ತು ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್‌ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಹಾಗೂ ದಾನಪತ್ರವನ್ನು ರದ್ದುಗೊಳಿಸಿ ಪುನಃ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದರು.

ಇನ್ನು ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಅಂತೆಯೇ ಆ ಉಪ ವಿಭಾಗಾಧಿಕಾರಿಗಳ ಮುಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾವಿರಾರೂ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಉಪ ವಿಭಾಗಾಧಿಕಾರಿಗಳೊಂದಿಗೆ ಪ್ರತಿ ತಿಂಗಳು ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲಾಧಿಕಾರಿಗಳಿಗೆ ಅರ್ಜಿ ನೀಡಲು ಕೂಡ ಅರ್ಜಿದಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

32 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

35 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

37 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

39 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

42 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

46 mins ago