ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು(ಮಾರ್ಚ್.12) ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ 2007 ರಲ್ಲಿ ಪೋಷಕರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ, ಅಂತೆಯೇ ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಇಲ್ಲವಾದರೆ ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಅದು ಆಗದಿದ್ದಲ್ಲಿ ಹಿರಿಯ ನಾಗರಿಕರು ಸೆಕ್ಷನ್ 9ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.
ತಂದೆ ಮತ್ತು ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಹಾಗೂ ದಾನಪತ್ರವನ್ನು ರದ್ದುಗೊಳಿಸಿ ಪುನಃ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದರು.
ಇನ್ನು ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಅಂತೆಯೇ ಆ ಉಪ ವಿಭಾಗಾಧಿಕಾರಿಗಳ ಮುಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾವಿರಾರೂ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಉಪ ವಿಭಾಗಾಧಿಕಾರಿಗಳೊಂದಿಗೆ ಪ್ರತಿ ತಿಂಗಳು ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲಾಧಿಕಾರಿಗಳಿಗೆ ಅರ್ಜಿ ನೀಡಲು ಕೂಡ ಅರ್ಜಿದಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…