ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಹೇಳಿಕೆ ನೀಡುವ ಬದಲು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್ನಲ್ಲಿ ಚರ್ಚಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ತೀರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿಯ ಕೇಂದ್ರ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಸತ್ನಲ್ಲಿ ಹೇಳಿಕೆ ನೀಡಬೇಕೇ ಹೊರತು, ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡಬಾರದು. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಹೆಜ್ಜೆ ಹೆಜ್ಜೆಗೂ ಅನ್ಯಾಯವಾಗುತ್ತಿದೆ. ಈ ಬಾರಿಯ ಬಜೆಟ್ ಕರ್ನಾಟಕಕ್ಕೆ ಕರಾಳ ಅಧ್ಯಾಯ ಆಗಿದೆ. ರಾಜ್ಯದ ಜನತೆ ಕಷ್ಟಪಟ್ಟು ದುಡಿದು ತೆರಿಗೆ ಕಟ್ಟುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ತೆರಿಗೆ ಕಟ್ಟುವ ಜನರ ಹಣವನ್ನು ಲೂಟಿ ಮಾಡುತ್ತಿದೆ. ಹೀಗಾಗಿ ದೇವೇಗೌಡರಿಗೆ ನಮ್ಮ ರಾಜ್ಯದ ಬಗ್ಗೆ ಇವರಿಗೆ ಬದ್ಧತೆ ಇದ್ದರೆ ಕರ್ನಾಟಕಕ್ಕೆ ಮೊದಲು ಕೇಂದ್ರದಿಂದ ನ್ಯಾಯ ಕೊಡಿಸಲಿ. ಅದನ್ನ ಬಿಟ್ಟು ಅವರು ಮಾಡೋ ಅನ್ಯಾಯವನ್ನು ಮುಚ್ಚಿಹಾಕಿ ಇವರು ಕೂಡಾ ಅನ್ಯಾಯದಲ್ಲಿ ಪಾಲಾಗೋದು ಬಿಡಲಿ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಇನ್ನೂ ಅನುಮತಿಯನ್ನೇ ನೀಡಿಲ್ಲ. ಆದರೆ ಸುಪ್ರೀಂಕೋರ್ಟ್ ಮೇಕೆದಾಟಿಗೆ ವಿರೋಧ ಇಲ್ಲ ಎಂದು ಹೇಳಿದೆ. ಹೀಗಾಗಿ ದೇವೇಗೌಡರೇ ಆಗಲಿ ಯಾರೇ ಆಗಲಿ ಮೊದಲು ಅನುಮತಿ ಕೊಡಿಸಿ. ಚನ್ನಪಟ್ಟಣ ಎಲೆಕ್ಷನ್ನಲ್ಲಿ ಕೈಹಿಡಿದು ಸಹಿ ಹಾಕಿಸುತ್ತೇವೆ ಎಂದು ಭಾಷಣ ಮಾಡಿದ್ದರು, ಅದನ್ನು ಮೊದಲು ಕೊಡಿಸಲಿ ಎಂದು ಕಿಡಿಕಾರಿದರು.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…