ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆ : ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ : ಸಿಎಂ

ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಇದನ್ನು ಓದಿ:ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ಪ್ರಶಸ್ತಿ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.

ಗೆಜೆಟ್ ಅಧಿಸೂಚನೆಯಾದರೆ ಅಣೆಕಟ್ಟು ಎತ್ತರಿಸಲು ಅನುಕೂಲ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.

ಇದನ್ನು ಓದಿ:ಬ್ರೇಕ್‌ ಫೇಲ್ಯೂರ್‌ ಆಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್‌

ನೀರಾವರಿ ನಮ್ಮ ಆದ್ಯತಾ ವಲಯ
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ
ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು,. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ , ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago