ರಾಜ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳ|ಮಿತಿ ಮಿರಿ ವರ್ತಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡಿ ಮಿತಿ ಮಿರಿ ವರ್ತಿಸುವುದು ಕಂಡು ಬಂದರೆ ಅಂತಹ ಫೈನಾನ್ಸ್‌ಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು(ಜನವರಿ.28) ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಒಟ್ಟು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಆದರೆ ಆ ಫೈನಾನ್ಸ್‌ಗಳು ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್‌ಬಿಐ ನೀಡಿರುವ ಗೈಡ್‌ಲೈನ್ಸ್‌ಗಳನ್ನು ಉಲ್ಲಂಘಿಸಿ ಸಾಲ ನೀಡುತ್ತಿದೆ. ಅಲ್ಲದೇ ಸಾಲ ನೀಡುವ ವೇಳೆ ಸಾಲ ಪಡೆಯುವವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಇಂತಹ ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ, ಜಿಲ್ಲಾಧಿಕಾರಿಗಳಿಗೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್‌ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಅಲ್ಲದೇ ರಾಜ್ಯ ಸರ್ಕಾರ ಇಂತಹ ಫೈನಾನ್ಸ್‌ ಕಂಪೆನಿಗಳು ಅಕ್ರಮಗಳನ್ನು ಮಾಡಿದರೆ ಅದನ್ನು ಕಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ಹೀಗಾಗಿ ಇದನ್ನು ಹೀಗೆ ಬಿಟ್ಟರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.

ಇನ್ನೂ ಆರ್‌ಬಿಐ ಗೈಡ್‌ ಲೈನ್ಸ್‌ ಪ್ರಕಾರ ಒಬ್ಬ ವ್ಯಕ್ತಿಗೆ 2 ಲಕ್ಷಕ್ಕಿಂತ ಅಧಿಕ ಸಾಲ ನೀಡಬಾರದು. ಆದರೆ ಅದನ್ನು ಯಾರು ಅನುಸರಿಸದೇ ಒಬ್ಬ ವ್ಯಕ್ಯಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್‌ ಕಂಪೆನಿಗಳ ಅಸ್ತಿತ್ವಕ್ಕೂ ತೊಂದರೆಯಾಗಲಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago