ಬೆಂಗಳೂರು: ಕೆಆರ್ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆಯೂ ಕೂಡ ಸರಿಹೋಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾದರಷ್ಟೇ ತಮಿಳುನಾಡಿಗೆ ನೀರು ಬಿಡಲಾಗುತ್ತದೆ. ಇಲ್ಲಿಗೆ ಮಳೆ ನಿಂತು ಜಲಾಶಯದ ನೀರಿನ ಮಟ್ಟ ಹಾಗೆಯೇ ಉಳಿದರೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ. ಮೊದಲು ನಮ್ಮ ರಾಜ್ಯದ ರೈತರ ಕಷ್ಟಗಳನ್ನು ಆಲಿಸೋಣ, ತದನಂತರ ಬೇರೆ ವಿಷಯಗಳ ಬಗ್ಗೆ ತಲೆಹಾಕೋಣ ಎಂದರು.
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…
ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…