ರಾಜ್ಯ

KRS ಒಂದೇ ವರ್ಷದಲ್ಲಿ 3ನೇ ಬಾರಿ ಭರ್ತಿ : ತಮಿಳುನಾಡು-ಕರ್ನಾಟಕ ನಡುವೆ ಈ ವರ್ಷ ಗಲಾಟೆ ಇಲ್ಲ

ಮಂಡ್ಯ : ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ತಮಿಳುನಾಡಿಗೆ ವರ್ಷಕ್ಕೆ ೧೭೭.೨೫ ಟಿಎಂಸಿ ನೀರನ್ನು ಹರಿಸಬೇಕಿತ್ತು. ಜೂನ್ ನಿಂದ ಜೂನ್ ವರೆಗಿನ ಜಲ ವರ್ಷ ಪ್ರಕಾರ ಜೂನ್ ೨೦೨೫ರಿಂದ ಇಲ್ಲಿಯವರೆಗೆ ೧೩೮.೦೧೪ ಟಿಎಂಸಿ ನೀರು ಬಿಳಿಗೊಂಡ್ಲು ಜಲ ಮಾಪನ ಕೇಂದ್ರದಿಂದ ತಮಿಳುನಾಡಿಗೆ ಬಿಡಬೇಕಿತ್ತು. ಈ ವರ್ಷ ಉತ್ತಮ ಮಳೆ ಹಿನ್ನೆಲೆಯಲ್ಲಿ ೨೭೩.೪೨೬ ಟಿಎಂಸಿ ನೀರು ಹರಿದು ಹೋಗಿದ್ದು, ಹೆಚ್ಚುವರಿಯಾಗಿ, ೧೩೫.೪೧೨ ಟಿಎಂಸಿ ನೀರು ಹರಿದುಹೋಗುತ್ತಿದೆ. ಹೀಗಾಗಿ ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಸಮಸ್ಯೆ ಪ್ರಕೃತಿದತ್ತವಾಗಿ ಬಗೆಹರಿದಿದೆ ಎಂದು ಹೇಳಿದ್ದಾರೆ.

ಇನ್ನೂ ಈ ವರ್ಷ ಬೆಂಗಳೂರಿನ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಕೆಆರ್‌ಎಸ್, ಕಬಿನಿ, ಹೇಮಾವತಿ ಜಲಾಶಯಗಳು ಅಕ್ಟೋಬರ್‌ನಲ್ಲಿ ಮತ್ತೆ ಭರ್ತಿಯಾಗಿ, ೧೧೫ ಟಿಎಂಸಿ ನೀರು ಸಂಗ್ರಹವಿದೆ. ಇದರ ಜೊತೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮದ ೬,೫೭೬ ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಇದರ ಜೊತೆಗೆ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಕೆರೆಗಳು ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಬೆಂಗಳೂರಿಗೆ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದಿದ್ದಾರೆ.

ಬೆಂಗಳೂರಿಗೆ ವರ್ಷಕ್ಕೆ ೩೧ ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕಿದೆ. ಅಂದರೆ ಪ್ರತಿ ತಿಂಗಳು ಬೆಂಗಳೂರಿಗರಿಗೆ ೨.೬೦ ಟಿಎಂಸಿ ನೀರಿನ ಅವಶ್ಯವಿದೆ. ಕೆಆರ್‌ಎಸ್ ಜೊತೆಗೆ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು, ಕೆರೆಗಳು ಭರ್ತಿಯಾಗಿದ್ದು ಬೆಂಗಳೂರಿಗೆ ಈ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ; KRS ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ: ಎಂ.ಲಕ್ಷ್ಮಣ್‌

ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ತಮಿಳುನಾಡಿಗೆ ಹರಿದ ನೀರು ಕೆಆರ್‌ಎಸ್ ಭರ್ತಿ ಹಿನ್ನೆಲೆ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಹರಿದುಹೋಗುತ್ತಿದೆ. ಬಿಳಿಗೊಂಡ್ಲು ಮಾಪನ ಕೇಂದ್ರದಿಂದ ಜೂನ್‌ನಲ್ಲಿ ೯.೧೯ ಟಿಎಂಸಿಗೆ ಬದಲಿಗೆ ೪೨.೨೫೬ ಟಿಎಂಸಿ, ಜುಲೈನಲ್ಲಿ ೩೧.೨೪ ಟಿಎಂಸಿ ಬದಲಿಗೆ ೧೦೩.೫೧೪ ಟಿಎಂಸಿ, ಆಗಸ್ಟ್‌ನಲ್ಲಿ ೪೫.೯೫ ಟಿಎಂಸಿ ಬದಲಿಗೆ ೫೧.೯೪೩ ಟಿಎಂಸಿ, ಸೆಪ್ಟೆಂಬರ್‌ನಲ್ಲಿ ೩೬.೭೬ ಟಿಎಂಸಿ ಬದಲಿಗೆ ೪೦.೭೯೦ ಟಿಎಂಸಿ, ಅಕ್ಟೋಬರ್ ನಲ್ಲಿ ೧೪.೩೫ ಟಿಎಂಸಿ ಬದಲಿಗೆ ೩೧.೩೪೪ ಟಿಎಂಸಿಯಂತೆ ಈ ವರ್ಷ ತಮಿಳುನಾಡಿಗೆ ಇದುವರೆಗೆ ೧೩೮.೦೧೪ ಟಿಎಂಸಿ ನೀರಿನ ಬದಲಿಗೆ ೨೭೩.೪೨೬ ಟಿಎಂಸಿ ನೀರು ಹರಿದುಹೋಗಿದೆ.

ಅಕ್ಟೋಬರ್ ಮೂರನೇ ವಾರ ಕೆಆರ್ ಎಸ್ ನಲ್ಲಿ ಗರಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದ್ದು, ಹೊರಹರಿವಿನ ಪ್ರಮಾಣವನ್ನು ಕೂಡ ಹೆಚ್ಚಿಸಲಾಗಿದೆ. ಕೆಆರ್‌ಎಸ್ ನಿಂದ ಹೊರಹರಿವು ೨೦,೫೪೦ ಕ್ಯೂಸೆಕ್ಸ್ ಇದೆ. ಬಿಳಿಗೊಂಡ್ಲು ಮಾಪನ ಕೇಂದ್ರದಲ್ಲಿ ಹೊರಹರಿವು ೪೧,೪೨೪ ಕ್ಯೂಸೆಕ್ಸ್ ನಷ್ಟಿದೆ ಎಂದು ತಿಳಿಸಿದ್ದಾರೆ.

೯೩ ವರ್ಷಗಳ ಬಳಿಕ ಮೂರನೇ ಬಾರಿ ಕೆಆರ್‌ಎಸ್ ಭರ್ತಿ:

೨೦೨೪ರಲ್ಲಿ ಕಾಡಿದ ಬರ ೨೦೨೫ರಲ್ಲಿ ಕಣ್ಮರೆಯಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ ೯೩ ವರ್ಷದ ಬಳಿಕ ಕೆಆರ್‌ಎಸ್ ಜೂನ್ ನಲ್ಲೇ ಭರ್ತಿಯಾಗಿ ಇತಿಹಾಸ ಸೃಷ್ಟಿಸಿತು. ನಂತರ ಅಕ್ಟೋಬರ್ ಎರಡನೇ ವಾರದಲ್ಲಿ ಜಲಾಶಯ ಎರಡನೇ ಬಾರಿ ಭರ್ತಿಯಾಗಿತ್ತು. ಅ.೧೮ರಿಂದ ೨೩ರವರೆಗೆ ಅಣೆಕಟ್ಟೆಯ ಗರಿಷ್ಠ ಸಾಮರ್ಥ್ಯ ೧೨೪.೮೦ ಅಡಿಗಳಷ್ಟು ನೀರು ಸಂಗ್ರಹ ಕಾಯ್ದುಕೊಳ್ಳುವ ಮೂಲಕ ವರ್ಷದಲ್ಲಿ ಮೂರನೇ ಬಾರಿ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ. ೯೩ ವರ್ಷದಲ್ಲಿ ೧೬ ಬಾರಿ ಮಾತ್ರ ಕೆಆರ್‌ಎಸ್ ಭರ್ತಿಯಾಗಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆ-ಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

5 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

7 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

8 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago