ರಾಜ್ಯ

KRS ಒಂದೇ ವರ್ಷದಲ್ಲಿ 3ನೇ ಬಾರಿ ಭರ್ತಿ : ತಮಿಳುನಾಡು-ಕರ್ನಾಟಕ ನಡುವೆ ಈ ವರ್ಷ ಗಲಾಟೆ ಇಲ್ಲ

ಮಂಡ್ಯ : ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ತಮಿಳುನಾಡಿಗೆ ವರ್ಷಕ್ಕೆ ೧೭೭.೨೫ ಟಿಎಂಸಿ ನೀರನ್ನು ಹರಿಸಬೇಕಿತ್ತು. ಜೂನ್ ನಿಂದ ಜೂನ್ ವರೆಗಿನ ಜಲ ವರ್ಷ ಪ್ರಕಾರ ಜೂನ್ ೨೦೨೫ರಿಂದ ಇಲ್ಲಿಯವರೆಗೆ ೧೩೮.೦೧೪ ಟಿಎಂಸಿ ನೀರು ಬಿಳಿಗೊಂಡ್ಲು ಜಲ ಮಾಪನ ಕೇಂದ್ರದಿಂದ ತಮಿಳುನಾಡಿಗೆ ಬಿಡಬೇಕಿತ್ತು. ಈ ವರ್ಷ ಉತ್ತಮ ಮಳೆ ಹಿನ್ನೆಲೆಯಲ್ಲಿ ೨೭೩.೪೨೬ ಟಿಎಂಸಿ ನೀರು ಹರಿದು ಹೋಗಿದ್ದು, ಹೆಚ್ಚುವರಿಯಾಗಿ, ೧೩೫.೪೧೨ ಟಿಎಂಸಿ ನೀರು ಹರಿದುಹೋಗುತ್ತಿದೆ. ಹೀಗಾಗಿ ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಸಮಸ್ಯೆ ಪ್ರಕೃತಿದತ್ತವಾಗಿ ಬಗೆಹರಿದಿದೆ ಎಂದು ಹೇಳಿದ್ದಾರೆ.

ಇನ್ನೂ ಈ ವರ್ಷ ಬೆಂಗಳೂರಿನ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಕೆಆರ್‌ಎಸ್, ಕಬಿನಿ, ಹೇಮಾವತಿ ಜಲಾಶಯಗಳು ಅಕ್ಟೋಬರ್‌ನಲ್ಲಿ ಮತ್ತೆ ಭರ್ತಿಯಾಗಿ, ೧೧೫ ಟಿಎಂಸಿ ನೀರು ಸಂಗ್ರಹವಿದೆ. ಇದರ ಜೊತೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮದ ೬,೫೭೬ ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಇದರ ಜೊತೆಗೆ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಕೆರೆಗಳು ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಬೆಂಗಳೂರಿಗೆ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದಿದ್ದಾರೆ.

ಬೆಂಗಳೂರಿಗೆ ವರ್ಷಕ್ಕೆ ೩೧ ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕಿದೆ. ಅಂದರೆ ಪ್ರತಿ ತಿಂಗಳು ಬೆಂಗಳೂರಿಗರಿಗೆ ೨.೬೦ ಟಿಎಂಸಿ ನೀರಿನ ಅವಶ್ಯವಿದೆ. ಕೆಆರ್‌ಎಸ್ ಜೊತೆಗೆ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು, ಕೆರೆಗಳು ಭರ್ತಿಯಾಗಿದ್ದು ಬೆಂಗಳೂರಿಗೆ ಈ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ; KRS ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ: ಎಂ.ಲಕ್ಷ್ಮಣ್‌

ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ತಮಿಳುನಾಡಿಗೆ ಹರಿದ ನೀರು ಕೆಆರ್‌ಎಸ್ ಭರ್ತಿ ಹಿನ್ನೆಲೆ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಹರಿದುಹೋಗುತ್ತಿದೆ. ಬಿಳಿಗೊಂಡ್ಲು ಮಾಪನ ಕೇಂದ್ರದಿಂದ ಜೂನ್‌ನಲ್ಲಿ ೯.೧೯ ಟಿಎಂಸಿಗೆ ಬದಲಿಗೆ ೪೨.೨೫೬ ಟಿಎಂಸಿ, ಜುಲೈನಲ್ಲಿ ೩೧.೨೪ ಟಿಎಂಸಿ ಬದಲಿಗೆ ೧೦೩.೫೧೪ ಟಿಎಂಸಿ, ಆಗಸ್ಟ್‌ನಲ್ಲಿ ೪೫.೯೫ ಟಿಎಂಸಿ ಬದಲಿಗೆ ೫೧.೯೪೩ ಟಿಎಂಸಿ, ಸೆಪ್ಟೆಂಬರ್‌ನಲ್ಲಿ ೩೬.೭೬ ಟಿಎಂಸಿ ಬದಲಿಗೆ ೪೦.೭೯೦ ಟಿಎಂಸಿ, ಅಕ್ಟೋಬರ್ ನಲ್ಲಿ ೧೪.೩೫ ಟಿಎಂಸಿ ಬದಲಿಗೆ ೩೧.೩೪೪ ಟಿಎಂಸಿಯಂತೆ ಈ ವರ್ಷ ತಮಿಳುನಾಡಿಗೆ ಇದುವರೆಗೆ ೧೩೮.೦೧೪ ಟಿಎಂಸಿ ನೀರಿನ ಬದಲಿಗೆ ೨೭೩.೪೨೬ ಟಿಎಂಸಿ ನೀರು ಹರಿದುಹೋಗಿದೆ.

ಅಕ್ಟೋಬರ್ ಮೂರನೇ ವಾರ ಕೆಆರ್ ಎಸ್ ನಲ್ಲಿ ಗರಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದ್ದು, ಹೊರಹರಿವಿನ ಪ್ರಮಾಣವನ್ನು ಕೂಡ ಹೆಚ್ಚಿಸಲಾಗಿದೆ. ಕೆಆರ್‌ಎಸ್ ನಿಂದ ಹೊರಹರಿವು ೨೦,೫೪೦ ಕ್ಯೂಸೆಕ್ಸ್ ಇದೆ. ಬಿಳಿಗೊಂಡ್ಲು ಮಾಪನ ಕೇಂದ್ರದಲ್ಲಿ ಹೊರಹರಿವು ೪೧,೪೨೪ ಕ್ಯೂಸೆಕ್ಸ್ ನಷ್ಟಿದೆ ಎಂದು ತಿಳಿಸಿದ್ದಾರೆ.

೯೩ ವರ್ಷಗಳ ಬಳಿಕ ಮೂರನೇ ಬಾರಿ ಕೆಆರ್‌ಎಸ್ ಭರ್ತಿ:

೨೦೨೪ರಲ್ಲಿ ಕಾಡಿದ ಬರ ೨೦೨೫ರಲ್ಲಿ ಕಣ್ಮರೆಯಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ ೯೩ ವರ್ಷದ ಬಳಿಕ ಕೆಆರ್‌ಎಸ್ ಜೂನ್ ನಲ್ಲೇ ಭರ್ತಿಯಾಗಿ ಇತಿಹಾಸ ಸೃಷ್ಟಿಸಿತು. ನಂತರ ಅಕ್ಟೋಬರ್ ಎರಡನೇ ವಾರದಲ್ಲಿ ಜಲಾಶಯ ಎರಡನೇ ಬಾರಿ ಭರ್ತಿಯಾಗಿತ್ತು. ಅ.೧೮ರಿಂದ ೨೩ರವರೆಗೆ ಅಣೆಕಟ್ಟೆಯ ಗರಿಷ್ಠ ಸಾಮರ್ಥ್ಯ ೧೨೪.೮೦ ಅಡಿಗಳಷ್ಟು ನೀರು ಸಂಗ್ರಹ ಕಾಯ್ದುಕೊಳ್ಳುವ ಮೂಲಕ ವರ್ಷದಲ್ಲಿ ಮೂರನೇ ಬಾರಿ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ. ೯೩ ವರ್ಷದಲ್ಲಿ ೧೬ ಬಾರಿ ಮಾತ್ರ ಕೆಆರ್‌ಎಸ್ ಭರ್ತಿಯಾಗಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆ-ಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

9 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

3 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

3 hours ago