Mysore
19
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಪಾಕಿಸ್ತಾನದ ಪರ ಮರಿ ಖರ್ಗೆ ಇದ್ದಾರೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿ

ks eshwarappa

ವಿಜಯಪುರ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡೆಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಕೊತ್ತೂರು ಮಂಜುನಾಥ್‌, ದಿನೇಶ್‌ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಗುಂಡು ಹಾಕಿದರೆ ಮಾತ್ರ ಎಲ್ಲಾ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು ಎಂದು ಕಿಡಿಕಾರಿದರು.

ಇನ್ನು ಸೀನಿಯರ್‌ ಖರ್ಗೆ ವಿಧಿ ಇಲ್ಲದೇ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿ ಬರುತ್ತಿದೆ ಎಂದು ಕಿಡಿಕಾರಿದರು.

ಇನ್ನು ಕಾಂಗ್ರೆಸ್‌ ಸಾಧನಾ ಸಮಾವೇಶದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸ್ತೆಯ ಒಂದು ಗುಂಡಿ ಕೂಡ ಮುಚ್ಚಿಲ್ಲ. ಒಂದು ಅಭಿವೃದ್ಧಿ ಕೆಲಸ ಕೂಡ ನಡೆದಿಲ್ಲ. ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!