ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೆ ಸಂಬಂಧಿಸಿದಂತೆ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.
ಕಾಂತೇಶ್ ಅವರಿಗೆ ಸಂಬಂಧಿಸಿ ಅಶ್ಲೀಲ ಪೋಟೊ, ವಿಡಿಯೋ, ಸ್ಕ್ರೀನ್ ಶಾಟ್ ಅಥವಾ ಆಡಿಯೋಗಳನ್ನು ಪ್ರಸಾರ ಮತ್ತು ಪ್ರಕಟಣೆ ಮಾಡುವುದಕ್ಕೆ ನಿರ್ಭಂದ ಹೇರಿ ಕೋರ್ಟ್ ಏಪ್ರಿಲ್ 27 ರಂದು ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ವೇಳೆ ನನ್ನ ಹೆಸರಿಗೆ ಮಸಿ ಬಳಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಕಾಂತೇಶ್ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು
ದಾವೆಯಲ್ಲಿ ಪ್ರತಿವಾದಿಗಳಾಗಿರುವ ವಿವಿಧ ಮಾಧ್ಯಮಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಈ ಸಂಬಂಧ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಲಾಗಿದೆ.
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…