ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೆ ಸಂಬಂಧಿಸಿದಂತೆ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.
ಕಾಂತೇಶ್ ಅವರಿಗೆ ಸಂಬಂಧಿಸಿ ಅಶ್ಲೀಲ ಪೋಟೊ, ವಿಡಿಯೋ, ಸ್ಕ್ರೀನ್ ಶಾಟ್ ಅಥವಾ ಆಡಿಯೋಗಳನ್ನು ಪ್ರಸಾರ ಮತ್ತು ಪ್ರಕಟಣೆ ಮಾಡುವುದಕ್ಕೆ ನಿರ್ಭಂದ ಹೇರಿ ಕೋರ್ಟ್ ಏಪ್ರಿಲ್ 27 ರಂದು ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ವೇಳೆ ನನ್ನ ಹೆಸರಿಗೆ ಮಸಿ ಬಳಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಕಾಂತೇಶ್ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು
ದಾವೆಯಲ್ಲಿ ಪ್ರತಿವಾದಿಗಳಾಗಿರುವ ವಿವಿಧ ಮಾಧ್ಯಮಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಈ ಸಂಬಂಧ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಲಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…