ರಾಜ್ಯ

ಕೆಎಸ್‌ಡಿಎಲ್ ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು.

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.

ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.

ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ.ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್.ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

42 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

57 mins ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

2 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

4 hours ago