ರಾಜ್ಯ

ಕೆ.ಎಸ್.ಡಿ.ಎಲ್ : ಸರ್ಕಾರಕ್ಕೆ ರೂ.135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು : ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

ಇದನ್ನು ಓದಿ: ಚಾ.ನಗರ | ಬುದ್ದನ ವಿಗ್ರಹ ಒಡೆದು,ಅಂಬೇಡ್ಕರ್‌ ನಾಮಫಲಕ ಕಿತ್ತು ವಿರೂಪ

ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

11 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

11 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

11 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

11 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

23 hours ago