ರಾಜ್ಯ

KSET-2024: ಕೆ-ಸೆಟ್‌ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)‌ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಬಗ್ಗೆ ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದ್ದು, ನವೆಂಬರ್‌ 24 ರಂದು ಕೆ-ಸೆಟ್‌ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಅರ್ಹರು ಆನ್‌ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು http://kea.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

41 ವಿಷಯಗಳಿಗೆ ಕೆ-ಸೆಟ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ರಾಜ್ಯದ ಯಾವುದೇ ಮೂಲದ ವಿಶ್ವವಿದ್ಯಾನಿಲಯದಲ್ಲಿ ಅಥವಾ ಕಾಲೇಜಿನಲ್ಲಿ ಪಿಎಚ್‌ಡಿ ವ್ಯಾಸಂಗ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಜೊತೆಗೆ ರಾಜ್ಯ ಸರ್ಕಾರ ನಡೆಸುವ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ಕೆ-ಸೆಟ್‌ 2024ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
ಪರೀಕ್ಷೆ ದಿನಾಂಕ: ನವೆಂಬರ್‌ 24

ವಯೋಮಿತಿ: ಗರಿಷ್ಠ ವಯೋಮಿತಿ ಇರುವುದಿಲ್ಲ.
ಪರೀಕ್ಷಾ ಶುಲ್ಕ ಪಾವತಿಸುವ ವಿಧಾನ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ,3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: ರೂ. 1.000
ಪ್ರವರ್ಗ1,ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ: ರೂ.700

ಪರೀಕ್ಷಾ ವಿಧಾನ:
ಪತ್ರಿಕೆ-1: 50 ಪ್ರಶ್ನೆ(100 ಅಂಕ)
ಪತ್ರಿಕೆ-2:100 ಪ್ರಶ್ನೆ (200 ಅಂಕ)
ಪರೀಕ್ಷೆ ಬರೆಯಲು 3 ಗಂಟೆ ಸಮಯವಿರುತ್ತದೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

29 mins ago

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

2 hours ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

2 hours ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

2 hours ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

3 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

4 hours ago