ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಕೆಇಎ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ನೀಡಿದ್ದು, ನವೆಂಬರ್ 24 ರಂದು ಕೆ-ಸೆಟ್ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಅರ್ಹರು ಆನ್ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು http://kea.kar.nic.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
41 ವಿಷಯಗಳಿಗೆ ಕೆ-ಸೆಟ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ರಾಜ್ಯದ ಯಾವುದೇ ಮೂಲದ ವಿಶ್ವವಿದ್ಯಾನಿಲಯದಲ್ಲಿ ಅಥವಾ ಕಾಲೇಜಿನಲ್ಲಿ ಪಿಎಚ್ಡಿ ವ್ಯಾಸಂಗ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಜೊತೆಗೆ ರಾಜ್ಯ ಸರ್ಕಾರ ನಡೆಸುವ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.
ಕೆ-ಸೆಟ್ 2024ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 22
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 26
ಪರೀಕ್ಷೆ ದಿನಾಂಕ: ನವೆಂಬರ್ 24
ವಯೋಮಿತಿ: ಗರಿಷ್ಠ ವಯೋಮಿತಿ ಇರುವುದಿಲ್ಲ.
ಪರೀಕ್ಷಾ ಶುಲ್ಕ ಪಾವತಿಸುವ ವಿಧಾನ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ,3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: ರೂ. 1.000
ಪ್ರವರ್ಗ1,ಎಸ್ಸಿ, ಎಸ್ಟಿ, ವಿಶೇಷ ಚೇತನರು ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ: ರೂ.700
ಪರೀಕ್ಷಾ ವಿಧಾನ:
ಪತ್ರಿಕೆ-1: 50 ಪ್ರಶ್ನೆ(100 ಅಂಕ)
ಪತ್ರಿಕೆ-2:100 ಪ್ರಶ್ನೆ (200 ಅಂಕ)
ಪರೀಕ್ಷೆ ಬರೆಯಲು 3 ಗಂಟೆ ಸಮಯವಿರುತ್ತದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…