ರಾಜ್ಯ

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ ಸಾಧನೆಗೆ ಕೊಡುಗೆ ನೀಡುವ ಶೈಕ್ಷಣಿಕ ನಾಯಕತ್ವ ಹೊಂದಿರುವವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.

ಅಭ್ಯರ್ಥಿಗಳು 1992ರ ನಿಯಮಾವಳಿ ಪ್ರಕಾರ ನಿಗದಿಪಡಿಸಿದ ಅರ್ಹತೆಗಳನ್ನು ಹೊಂದಿರಬೇಕು. ಅಧ್ಯಾಪನ, ಸಂಶೋಧನೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅನುಭವ ಇರಬೇಕೆಂದು ಸೂಚಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳು www.ksoumysuru.ac.in ವೆಬ್ ಸೈಟ್ ನಲ್ಲಿ ಲಭ್ಯವಿವೆ. ಭರ್ತಿಯಾದ ಅರ್ಜಿಗಳನ್ನು ‘ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿ.ಬಿ. ನಂ. 5033, ರಾಜಭವನ, ಬೆಂಗಳೂರು-560001’ ವಿಳಾಸಕ್ಕೆ ಕಳುಹಿಸಬೇಕು.

ಮೇ 10 ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಜೊತೆಗೆ ಅರ್ಜಿಯ ಸಾಫ್ಟ್‌ ಕಾಪಿಯನ್ನು us.university.rb@karnataka.gov.in ಇಮೇಲ್‌ಗೆ ಕಳುಹಿಸುವಂತೆ ಸೂಚಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

19 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago