ರಾಜ್ಯ

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ 2000 ವಿಶೇಷ ಬಸ್‌ ಸಂಚಾರ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೀಪಾವಳಿ ಹಬ್ಬಕ್ಕೆ ವಿಶೇಷ ಬಸ್‌ಗ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ.

ನವೆಂಬರ್‌ 12ರಿಂದ ದೀಪಾವಳಿ ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಯಾಣಿಕರು ಮುಂಗಡ ಬುಕ್ಕಿಂಗ್‌ ಮಾಡಿಕೊಂಡು ಅಥವಾ ನಿಲ್ದಾಣಗಳಲ್ಲಿ ಬಂದು ಟಿಕೆಟ್‌ ಪಡೆದು ಸಂಚಾರ ನಡೆಸಬಹುದು.

ವಿಶೇಷ ಬಸ್‌ ಯಾವಾಗಿನಿಂದ ಆರಂಭ? : ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್‌ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿವಿಧ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಿಂದ ವಿಶೇಷ ಬಸ್‌ ಸಂಚರಿಸಲಿವೆ.

ಹಬ್ಬದ ಬಳಿಕ ಹಿಂದಿರುಗುವುದಕ್ಕೂ ವಿಶೇಷ ಬಸ್‌ ಲಭ್ಯ : ಇನ್ನು ಹಬ್ಬ ಮುಗಿದ ಬಳಿಕ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಜಿಲ್ಲಾ ಕೇಂದ್ರ, ಪ್ರಮುಖ ನಗರ, ಪಟ್ಟಣಗಳಿಂದ ನವೆಂಬರ್‌ 14 ಮತ್ತು 15 ರಂದು ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಯಾವ ನಿಲ್ದಾಣದಿಂದ ಯಾವ ಊರಿಗೆ ಬಸ್‌?

ಕೆಂಪೇಗೌಡ ಬಸ್ ನಿಲ್ದಾಣ – ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ.

ಮೈಸೂರು ರಸ್ತೆ ಸ್ಯಾಟ್‌ಲೈಟ್ ಬಸ್ ನಿಲ್ದಾಣ – ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ.
ಶಾಂತಿನಗರ ಬಸ್ ನಿಲ್ದಾಣ – ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ.

ಟಿಕೆಟ್‌ನಲ್ಲಿಯೂ ರಿಯಾಯಿತಿ 

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಟಿಕೆಟ್‌ ಬುಕ್ಕಿಂಗ್‌ ಎಲ್ಲಿ?
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಜಿಲ್ಲಾ/ ತಾಲೂಕುಗಳಲ್ಲಿಯೂ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

1 hour ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago