ರಾಜ್ಯ

ಶಕ್ತಿ ಯೋಜನೆ: ಬಸ್‌ನಲ್ಲಿ ಅಜ್ಜಿ-ಮೊಮ್ಮಗಳಿಗೆ ಉಚಿತ, ಲವ್‌ ಬರ್ಡ್ಸ್‌ಗೆ 444 ರೂ ಚಾರ್ಜ್‌ ‌

ರಾಜ್ಯದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುವ ವಿಷಯ ಎಂದರೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗಂತ ನೀವೇನಾದರೂ ನಿಮ್ಮ ಪ್ರೀತಿಯ ಸಾಕು ಪ್ರಾಣಿ-ಪಕ್ಷಿ, ದೊಡ್ಡ ಪ್ರಮಾಣದ ಲಗೇಜ್‌ ಕೊಂಡ್ಯೊದ್ದರೆ ಅದಕ್ಕಾಗಿ ನೀವು ದೊಡ್ಡ ಪ್ರಮಾಣದಲ್ಲೇ ಶುಲ್ಕ ಪಾವತಿಸಬೇಕಾಗುತ್ತದೆ. ಇದೀಗ ಅಂತಹದ್ದೆ ಒಂದು ಘಟನೆ ಬೆಂಗಳೂರಿನ ಸ್ಯಾಟಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಹೌದು, ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಅಜ್ಜಿ ಮೊಮ್ಮಗಳಿಗೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್‌ ನೀಡಿ, ಅವರು ಜೊತೆಯಲ್ಲಿ ತಂದಿದ್ದ ಲವ್‌ ಬರ್ಡ್ಸ್‌ಗೆ ಬರೋಬ್ಬರಿ 444 ರೂಪಾಯಿ ಪ್ರಯಾಣ ಶುಲ್ಕವನ್ನು ವಿಧಿಸಿ ಟಿಕೆಟ್‌ ನೀಡಲಾಗಿದೆ. ಹೀಗೆ ಪಕ್ಷಿಗಳಿಗೆ ಇಷ್ಟು ಮೊತ್ತದ ಟಿಕೆಟ್‌ ನೀಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರೀ ಚರ್ಚೆಗೂ ಒಳಗಾಗಿದೆ.

ಅಜ್ಜಿ ಮೊಮ್ಮಗಳು ಬೆಂಗಳೂರಿಂದ ಮೈಸೂರು ಕಡೆಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದು, ಅವರ ಜೊತೆಯಲ್ಲಿ ಪಂಜರದಲ್ಲಿ ಪಕ್ಷಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಅಜ್ಜಿ-ಮೊಮ್ಮಗಳಿಗೆ ಕಂಡಕ್ಟರ್‌ ಫ್ರೀ ಟಿಕೆಟ್‌ ಕೊಟ್ಟರು. ಆದರೆ ಪಂಜರದ ಗಿಳಿಗಳಿಗೆ ಪ್ರಯಾಣ ಶುಲ್ಕ ಹಾಕಿದ್ದು, ನಾಲ್ಕು ಮಕ್ಕಳು ಎಂದು ಟಿಕೆಟ್‌ನಲ್ಲಿ ನಮೂದಿಸಿದ್ದಾರೆ. ಒಂದು ಗಿಣಿಗೆ 111 ರೂ ಬಿದ್ದಿದೆ. ಒಟ್ಟು ನಾಲ್ಕು ಹಕ್ಕಿಗಳಿಗೆ 444 ರೂ ವೆಚ್ಚದ ಟಿಕೆಟ್‌ ನೀಡಲಾಗಿದೆ.

andolana

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

49 mins ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

1 hour ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

1 hour ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

2 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

2 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago