ರಾಜ್ಯದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುವ ವಿಷಯ ಎಂದರೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗಂತ ನೀವೇನಾದರೂ ನಿಮ್ಮ ಪ್ರೀತಿಯ ಸಾಕು ಪ್ರಾಣಿ-ಪಕ್ಷಿ, ದೊಡ್ಡ ಪ್ರಮಾಣದ ಲಗೇಜ್ ಕೊಂಡ್ಯೊದ್ದರೆ ಅದಕ್ಕಾಗಿ ನೀವು ದೊಡ್ಡ ಪ್ರಮಾಣದಲ್ಲೇ ಶುಲ್ಕ ಪಾವತಿಸಬೇಕಾಗುತ್ತದೆ. ಇದೀಗ ಅಂತಹದ್ದೆ ಒಂದು ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹೌದು, ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಅಜ್ಜಿ ಮೊಮ್ಮಗಳಿಗೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಿ, ಅವರು ಜೊತೆಯಲ್ಲಿ ತಂದಿದ್ದ ಲವ್ ಬರ್ಡ್ಸ್ಗೆ ಬರೋಬ್ಬರಿ 444 ರೂಪಾಯಿ ಪ್ರಯಾಣ ಶುಲ್ಕವನ್ನು ವಿಧಿಸಿ ಟಿಕೆಟ್ ನೀಡಲಾಗಿದೆ. ಹೀಗೆ ಪಕ್ಷಿಗಳಿಗೆ ಇಷ್ಟು ಮೊತ್ತದ ಟಿಕೆಟ್ ನೀಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರೀ ಚರ್ಚೆಗೂ ಒಳಗಾಗಿದೆ.
ಅಜ್ಜಿ ಮೊಮ್ಮಗಳು ಬೆಂಗಳೂರಿಂದ ಮೈಸೂರು ಕಡೆಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದು, ಅವರ ಜೊತೆಯಲ್ಲಿ ಪಂಜರದಲ್ಲಿ ಪಕ್ಷಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಅಜ್ಜಿ-ಮೊಮ್ಮಗಳಿಗೆ ಕಂಡಕ್ಟರ್ ಫ್ರೀ ಟಿಕೆಟ್ ಕೊಟ್ಟರು. ಆದರೆ ಪಂಜರದ ಗಿಳಿಗಳಿಗೆ ಪ್ರಯಾಣ ಶುಲ್ಕ ಹಾಕಿದ್ದು, ನಾಲ್ಕು ಮಕ್ಕಳು ಎಂದು ಟಿಕೆಟ್ನಲ್ಲಿ ನಮೂದಿಸಿದ್ದಾರೆ. ಒಂದು ಗಿಣಿಗೆ 111 ರೂ ಬಿದ್ದಿದೆ. ಒಟ್ಟು ನಾಲ್ಕು ಹಕ್ಕಿಗಳಿಗೆ 444 ರೂ ವೆಚ್ಚದ ಟಿಕೆಟ್ ನೀಡಲಾಗಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…