ರಾಜ್ಯದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುವ ವಿಷಯ ಎಂದರೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗಂತ ನೀವೇನಾದರೂ ನಿಮ್ಮ ಪ್ರೀತಿಯ ಸಾಕು ಪ್ರಾಣಿ-ಪಕ್ಷಿ, ದೊಡ್ಡ ಪ್ರಮಾಣದ ಲಗೇಜ್ ಕೊಂಡ್ಯೊದ್ದರೆ ಅದಕ್ಕಾಗಿ ನೀವು ದೊಡ್ಡ ಪ್ರಮಾಣದಲ್ಲೇ ಶುಲ್ಕ ಪಾವತಿಸಬೇಕಾಗುತ್ತದೆ. ಇದೀಗ ಅಂತಹದ್ದೆ ಒಂದು ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹೌದು, ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಅಜ್ಜಿ ಮೊಮ್ಮಗಳಿಗೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಿ, ಅವರು ಜೊತೆಯಲ್ಲಿ ತಂದಿದ್ದ ಲವ್ ಬರ್ಡ್ಸ್ಗೆ ಬರೋಬ್ಬರಿ 444 ರೂಪಾಯಿ ಪ್ರಯಾಣ ಶುಲ್ಕವನ್ನು ವಿಧಿಸಿ ಟಿಕೆಟ್ ನೀಡಲಾಗಿದೆ. ಹೀಗೆ ಪಕ್ಷಿಗಳಿಗೆ ಇಷ್ಟು ಮೊತ್ತದ ಟಿಕೆಟ್ ನೀಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರೀ ಚರ್ಚೆಗೂ ಒಳಗಾಗಿದೆ.
ಅಜ್ಜಿ ಮೊಮ್ಮಗಳು ಬೆಂಗಳೂರಿಂದ ಮೈಸೂರು ಕಡೆಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದು, ಅವರ ಜೊತೆಯಲ್ಲಿ ಪಂಜರದಲ್ಲಿ ಪಕ್ಷಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಅಜ್ಜಿ-ಮೊಮ್ಮಗಳಿಗೆ ಕಂಡಕ್ಟರ್ ಫ್ರೀ ಟಿಕೆಟ್ ಕೊಟ್ಟರು. ಆದರೆ ಪಂಜರದ ಗಿಳಿಗಳಿಗೆ ಪ್ರಯಾಣ ಶುಲ್ಕ ಹಾಕಿದ್ದು, ನಾಲ್ಕು ಮಕ್ಕಳು ಎಂದು ಟಿಕೆಟ್ನಲ್ಲಿ ನಮೂದಿಸಿದ್ದಾರೆ. ಒಂದು ಗಿಣಿಗೆ 111 ರೂ ಬಿದ್ದಿದೆ. ಒಟ್ಟು ನಾಲ್ಕು ಹಕ್ಕಿಗಳಿಗೆ 444 ರೂ ವೆಚ್ಚದ ಟಿಕೆಟ್ ನೀಡಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…