ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರ ನಿಲ್ದಾಣದಿಂದ ಅ.17 ರಿಂದ 20 ರವರೆಗೆ ಬಸ್ಗಳು ಹೊರಡಲಿವೆ. ಜೊತೆಗೆ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಅ.22 ರಿಂದ 26 ರವರೆಗೆ ಬೆಂಗಳೂರಿಗೆ ವಿಶೇಷ ಬಸ್ಗಳು ಬರಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲ್ಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬದ್ ಮುಂತಾದ ರಸ್ತೆಗಳಿಗೆ ವಿಶೇಷಕ ಕಾರ್ಯಾಚರಣೆ ಮಾಡಲಿವೆ.
ಇದನ್ನು ಓದಿ: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್ಗಳು ತೆರಳಲಿವೆ.
ತಮಿಳುನಾಡು, ಕೇರಳ, ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್,ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ತೆರಳುವ ಪ್ರತಿಷ್ಠಿತ ಸಾರಿಗೆ ಬಸ್ಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿರುವ ಪ್ರಮುಖ ನಗರಗಳಲ್ಲಿ ನಿಗಮದ ಕಚೇರಿಯಲ್ಲಿ ಮುಂಗಡ ಹಾಸನಗಳನ್ನು ಕಾಯ್ದಿರಿಸುವ ಕೌಂಟರ್ಗಳಿದ್ದು, ಇವುಗಳ ಮೂಲಕವು ಸಹ ಮುಂಗಡವಾಗಿ ಹಾಸನಗಳನ್ನು ಕಾಯ್ದಿರಿಸಬಹುದಾಗಿದೆ.
ವಿಶೇಷ ಬಸ್ಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ವೆಬ್ಸೈಟ್ಗಳಲ್ಲಿ ಒದಗಿಸಲಾಗಿದೆ ಎಂದು ನಿಗಮವು ತಿಳಿಸಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…