ರಾಜ್ಯ

ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಪ್ರತಿಷ್ಠಿತ ಬಸ್‍ಗಳ ದರದಲ್ಲಿ ಭರ್ಜರಿ ರಿಯಾಯಿತಿ ಘೋಷಿಸಿದೆ.

ಸೋಮವಾರದಿಂದಲೇ ಜಾರಿಗೆ ಬರುವಂತೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಲ್ಲಿ ಸಂಚರಿಸುವ ಪ್ರತಿಷ್ಠಿತ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಬಸ್‍ಗಳ ಪ್ರಯಾಣ ದರದಲ್ಲಿ ರಿಯಾಯಿತಿ ಸಿಗಲಿದೆ. ದೂರದ ಸ್ಥಳಕ್ಕೆ ಪ್ರಯಾಣಿಸುವವರಿಗೆ ಈ ನಿರ್ಧಾರದಿಂದ ಹೆಚ್ಚಿನ ಅನುಕೂಲ ಆಗಲಿದೆ.

ಬಹು ಮಾರ್ಗಗಳಲ್ಲಿ ತನ್ನ ಹಲವಾರು ಪ್ರೀಮಿಯಂ ಬಸ್ ಸೇವೆಗಳ ದರವನ್ನು ಶೇ. 5 ರಿಂದ ಶೇ.15 ರಷ್ಟು ಕಡಿಮೆ ಮಾಡಿದೆ.

ಏಪ್ರಿಲ್ ನಿಂದ ಜೂನ್ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ನಂತಹ ಸಮಯದಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಿರುತ್ತೆ. ಈ ಸಮಯದಲ್ಲಿ ಕೆಎರ್‍ಟಿಸಿ ಸಾಮಾನ್ಯವಾಗಿ ಪ್ರೀಮಿಯಂ ಸೇವೆಗಳ ದರವನ್ನು 10-15% ರಷ್ಟು ಹೆಚ್ಚಿಸುತ್ತದೆ. ಆದ್ರೆ ಇದೀಗ ಆಫ್ ಸೀಸನ್ ಸಮಯದಲ್ಲಿ ಬಸ್ ಟಿಕೆಟ್ ದರ ಇಳಿಸುವ ಮೂಲಕ, ಪ್ರಯಾಣಿಕರಿಗೆ ಇಲಾಖೆ ಬಿಗ್ ಆಫರ್ ನೀಡುತ್ತಿದೆ.

ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದ್ದು,. ಜನವರಿ.05 ರಿಂದಲೇ ದರ ರಿಯಾಯಿತಿ ಜಾರಿಯಾಗಿದೆ. ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಸಾರಿಗೆ ಬಸ್‌ಗಳ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಆಫರ್ ನೀಡಲಾಗುತ್ತದೆ.

ಬೆಂಗಳೂರಿನಿಂದ ಹೊರಡುವ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ ಮಾರ್ಗಗಳ ಬಸ್‍ಗಳ ಟಿಕೆಟ್ ದರದಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲು ನಿಗಮ ನಿರ್ಧರಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

4 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

4 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

4 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

4 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

4 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago