ರಾಜ್ಯ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯಿಂದ ಹೊಸ ವೋಲ್ವೋ ಬಸ್ ಪರಿವೀಕ್ಷಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸ ೯೬೦೦ ವೋಲ್ವೋ ಮಲ್ಟಿಯಾಕ್ಸಲ್‌ ಸೀಟರ್‌ ಪ್ರೋಟೋ ಟೈಪ್‌ ಬಸ್‌ ಅನ್ನು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಇಂದು ಪರಿವೀಕ್ಷಣೆ  ನಡೆಸಿದರು. ಶೀಘ್ರದಲ್ಲೆ ಈ ಹೊಸ ವೋಲ್ವೋ ಬಸ್‌ ರಸ್ತೆಗೆ ಇಳಿಯಲಿದೆ.

ಸಚಿವ ರಾಮಲಿಂಗಾರೆಡ್ಡಿ ಬಸ್‌ ಅನ್ನು ವೀಕ್ಷಿಸಿ , ಕರ್ನಾಟಕವು ವಿವಿಧ  ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಸೇರ್ಪಡೆಗೊಳಿಸುತ್ತಿರುವುದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಸ್‌ ಶಕ್ತಿಶಾಲಿ ಹ್ಯಾಲೊಜೆನ್‌ ಹೆಡ್‌ ಲೈಟ್ಗಳು ಮತ್ತು ಡೇ ರನ್ನಿಂಗ್‌ ಲೈಟ್‌ ಗಳೊಂದಿಗೆ ಹೊಸ ಪ್ಲಸ್‌ ಇಂಟೀರಿಯರ್ಸ್‌ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್‌ ವಿನ್ಯಾಸ ಹೊಂದಿರುವುದರಿಂದ ಕಣ್ಣು ಕುಕ್ಕುವ ಸೌಂದರ್ಯ ಹೊಂದಿದೆ. ಅಲ್ಲದೆ ಇದು ಏರೋಡೈನಾಮಿಕ್‌ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನವಾದ ತಂತ್ರಗಾರಿಕೆಯಿಂದ ಸುಧಾರಿತ ಇಂಜಿನ್‌ ಹೊಂದಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್‌ ನೀಡುತ್ತದೆ.

ಈ ಬಸ್‌ ಉದ್ದದಲ್ಲಿ ಶೇ ೩.೫ ಹೆಚ್ಚಳ ಇರುವುದರಿಂದ ಸಲೂನ್‌ ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಕೂಡ ಹೆಚ್ಚಾಗಿದೆ.  ಅಲ್ಲದೆ ಎತ್ತರದಲ್ಲಿ ಶೇ.೫.೬ ರಷ್ಟು ಹೆಚ್ಚಳವಿರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ. ಅಲ್ಲದೆ ವಿಶಾಲ ಲಗೇಜ್‌ ಸ್ಥಳಾವಕಾಶವಿದ್ದು, ಶೇ ೨೦ ರಷ್ಟು ಹೆಚ್ಚಿನ ಲಗ್ಗೇಜ್‌ ಇಡುವ ಸೌಲಭ್ಯ ವಿರುತ್ತದೆ. ಇನ್ನುವಿಂಡ್‌ ಶೀಲ್ಡ್‌ ಗಾಜು ಶೇ ೯.೫ ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್‌ ಸ್ಪಾಟ್‌ ಅನ್ನು ಕಡಿಮೆ ಮಾಡುತ್ತದೆ. ಇಷ್ಟೆ ಅಲ್ಲದೆ USB, ಚಾರ್ಜಿಂಗ್‌ ಪಾಯಿಂಟ್‌ ಸೇರಿ ಇನ್ನ ಸಾಕಷ್ಟು ಸೌಕರ್ಯಗಳನ್ನ  ಈ ಬಸ್‌ ನಲ್ಲಿ ಸಿಗುತ್ತದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago