ರಾಜ್ಯ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯಿಂದ ಹೊಸ ವೋಲ್ವೋ ಬಸ್ ಪರಿವೀಕ್ಷಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸ ೯೬೦೦ ವೋಲ್ವೋ ಮಲ್ಟಿಯಾಕ್ಸಲ್‌ ಸೀಟರ್‌ ಪ್ರೋಟೋ ಟೈಪ್‌ ಬಸ್‌ ಅನ್ನು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಇಂದು ಪರಿವೀಕ್ಷಣೆ  ನಡೆಸಿದರು. ಶೀಘ್ರದಲ್ಲೆ ಈ ಹೊಸ ವೋಲ್ವೋ ಬಸ್‌ ರಸ್ತೆಗೆ ಇಳಿಯಲಿದೆ.

ಸಚಿವ ರಾಮಲಿಂಗಾರೆಡ್ಡಿ ಬಸ್‌ ಅನ್ನು ವೀಕ್ಷಿಸಿ , ಕರ್ನಾಟಕವು ವಿವಿಧ  ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಸೇರ್ಪಡೆಗೊಳಿಸುತ್ತಿರುವುದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಸ್‌ ಶಕ್ತಿಶಾಲಿ ಹ್ಯಾಲೊಜೆನ್‌ ಹೆಡ್‌ ಲೈಟ್ಗಳು ಮತ್ತು ಡೇ ರನ್ನಿಂಗ್‌ ಲೈಟ್‌ ಗಳೊಂದಿಗೆ ಹೊಸ ಪ್ಲಸ್‌ ಇಂಟೀರಿಯರ್ಸ್‌ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್‌ ವಿನ್ಯಾಸ ಹೊಂದಿರುವುದರಿಂದ ಕಣ್ಣು ಕುಕ್ಕುವ ಸೌಂದರ್ಯ ಹೊಂದಿದೆ. ಅಲ್ಲದೆ ಇದು ಏರೋಡೈನಾಮಿಕ್‌ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನವಾದ ತಂತ್ರಗಾರಿಕೆಯಿಂದ ಸುಧಾರಿತ ಇಂಜಿನ್‌ ಹೊಂದಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್‌ ನೀಡುತ್ತದೆ.

ಈ ಬಸ್‌ ಉದ್ದದಲ್ಲಿ ಶೇ ೩.೫ ಹೆಚ್ಚಳ ಇರುವುದರಿಂದ ಸಲೂನ್‌ ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಕೂಡ ಹೆಚ್ಚಾಗಿದೆ.  ಅಲ್ಲದೆ ಎತ್ತರದಲ್ಲಿ ಶೇ.೫.೬ ರಷ್ಟು ಹೆಚ್ಚಳವಿರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ. ಅಲ್ಲದೆ ವಿಶಾಲ ಲಗೇಜ್‌ ಸ್ಥಳಾವಕಾಶವಿದ್ದು, ಶೇ ೨೦ ರಷ್ಟು ಹೆಚ್ಚಿನ ಲಗ್ಗೇಜ್‌ ಇಡುವ ಸೌಲಭ್ಯ ವಿರುತ್ತದೆ. ಇನ್ನುವಿಂಡ್‌ ಶೀಲ್ಡ್‌ ಗಾಜು ಶೇ ೯.೫ ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್‌ ಸ್ಪಾಟ್‌ ಅನ್ನು ಕಡಿಮೆ ಮಾಡುತ್ತದೆ. ಇಷ್ಟೆ ಅಲ್ಲದೆ USB, ಚಾರ್ಜಿಂಗ್‌ ಪಾಯಿಂಟ್‌ ಸೇರಿ ಇನ್ನ ಸಾಕಷ್ಟು ಸೌಕರ್ಯಗಳನ್ನ  ಈ ಬಸ್‌ ನಲ್ಲಿ ಸಿಗುತ್ತದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

48 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

50 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

52 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

53 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

58 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago