ರಾಜ್ಯ

ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಸೇವೆಗಳನ್ನು ಆರಂಭಿಸಿದೆ.

ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಶನಿವಾರ ಮತ್ತು ಭಾನುವಾರ ರಾಜಹಂಸ ಮತ್ತು ಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ ಪ್ಯಾಕೇಜ್‌ಟೂರ್ ಗಳನ್ನು ಪ್ರಾರಂಭಿಸಲಾಗಿದೆ.
ಪ್ಯಾಕೇಜ್ ಟೂರಿನಲ್ಲಿ ಪ್ರವೇಶ ಶುಲ್ಕ, ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಹೊರತುಪಡಿಸಿ ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ.

ಬೆಂಗಳೂರಿನಿಂದ ಗಗನಚುಕ್ಕಿ ಪ್ಯಾಕೇಜ್ ಟೂರ್‌ನಲ್ಲಿ ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಸ್ಥಳಗಳಿಗೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಿದ್ದು, ವಯಸ್ಕರಿಗೆ 750, ಮಕ್ಕಳಿಗೆ 600 ಪ್ರಯಾಣ ದರ ನಿಗದಿಪಡಿಸಲಾಗಿದೆ.

ಇದೇ ಮಾರ್ಗದಲ್ಲಿ ಸಂಚರಿಸುವ ಅಶ್ವಮೇಧ ಕ್ಲಾಸಿಕ್ ಬಸ್ ನ ಪ್ರಯಾಣ ದರ ವಯಸ್ಕರಿಗೆ 600 ಹಾಗೂ ಮಕ್ಕಳಿಗೆ 450 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಬೆಂಗಳೂರು-ಚಿಕ್ಕತಿರುಪತಿ ಪ್ರವಾಸದಲ್ಲಿ ಚಿಕ್ಕತಿರುಪತಿ, ಕೋಟಿಲಿಂಗೇಶ್ವರ, ಬಂಗಾರ ತಿರುಪತಿ, ಆವಣಿ, ಮುಳಬಾಗಿಲು, ಕುರುಡುಮಲೆ, ಕೋಲಾರ ಭಾಗದಲ್ಲಿ ಅಶ್ವಮೇಧ ಕ್ಲಾಸಿಕ್ ಬಸ್ ಸೇವೆ ಒದಗಿಸಲಿದ್ದು, ವಯಸ್ಕರಿಗೆ 600 ರೂ, ಮಕ್ಕಳಿಗೆ 450 ರೂ. ಪ್ರಯಾಣದರವಿದೆ. ಬೆಂಗಳೂರು ಮೇಲುಕೋಟೆ ಮಾರ್ಗದಲ್ಲಿ ಶ್ರೀರಂಗಪಟ್ಟಣ, ಕಲ್ಲಹಳ್ಳಿ, ಮೇಲುಕೋಟೆ ಪ್ರವಾಸಕ್ಕೆ ಅಶ್ವಮೇಧ ಕ್ಲಾಸಿಕ್ ಬಸ್‌ನಲ್ಲಿ ವಯಸ್ಕರಿಗೆ 670, ಮಕ್ಕಳಿಗೆ 500 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

18 mins ago