big shocking for ksrtc transport unions
ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಸೇವೆಗಳನ್ನು ಆರಂಭಿಸಿದೆ.
ಕೆಎಸ್ಆರ್ಟಿಸಿಯ ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಶನಿವಾರ ಮತ್ತು ಭಾನುವಾರ ರಾಜಹಂಸ ಮತ್ತು ಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ ಪ್ಯಾಕೇಜ್ಟೂರ್ ಗಳನ್ನು ಪ್ರಾರಂಭಿಸಲಾಗಿದೆ.
ಪ್ಯಾಕೇಜ್ ಟೂರಿನಲ್ಲಿ ಪ್ರವೇಶ ಶುಲ್ಕ, ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಹೊರತುಪಡಿಸಿ ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ.
ಬೆಂಗಳೂರಿನಿಂದ ಗಗನಚುಕ್ಕಿ ಪ್ಯಾಕೇಜ್ ಟೂರ್ನಲ್ಲಿ ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಸ್ಥಳಗಳಿಗೆ ರಾಜಹಂಸ ಬಸ್ ವ್ಯವಸ್ಥೆ ಕಲ್ಪಿಸಲಿದ್ದು, ವಯಸ್ಕರಿಗೆ 750, ಮಕ್ಕಳಿಗೆ 600 ಪ್ರಯಾಣ ದರ ನಿಗದಿಪಡಿಸಲಾಗಿದೆ.
ಇದೇ ಮಾರ್ಗದಲ್ಲಿ ಸಂಚರಿಸುವ ಅಶ್ವಮೇಧ ಕ್ಲಾಸಿಕ್ ಬಸ್ ನ ಪ್ರಯಾಣ ದರ ವಯಸ್ಕರಿಗೆ 600 ಹಾಗೂ ಮಕ್ಕಳಿಗೆ 450 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು-ಚಿಕ್ಕತಿರುಪತಿ ಪ್ರವಾಸದಲ್ಲಿ ಚಿಕ್ಕತಿರುಪತಿ, ಕೋಟಿಲಿಂಗೇಶ್ವರ, ಬಂಗಾರ ತಿರುಪತಿ, ಆವಣಿ, ಮುಳಬಾಗಿಲು, ಕುರುಡುಮಲೆ, ಕೋಲಾರ ಭಾಗದಲ್ಲಿ ಅಶ್ವಮೇಧ ಕ್ಲಾಸಿಕ್ ಬಸ್ ಸೇವೆ ಒದಗಿಸಲಿದ್ದು, ವಯಸ್ಕರಿಗೆ 600 ರೂ, ಮಕ್ಕಳಿಗೆ 450 ರೂ. ಪ್ರಯಾಣದರವಿದೆ. ಬೆಂಗಳೂರು ಮೇಲುಕೋಟೆ ಮಾರ್ಗದಲ್ಲಿ ಶ್ರೀರಂಗಪಟ್ಟಣ, ಕಲ್ಲಹಳ್ಳಿ, ಮೇಲುಕೋಟೆ ಪ್ರವಾಸಕ್ಕೆ ಅಶ್ವಮೇಧ ಕ್ಲಾಸಿಕ್ ಬಸ್ನಲ್ಲಿ ವಯಸ್ಕರಿಗೆ 670, ಮಕ್ಕಳಿಗೆ 500 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…