ಬೆಂಗಳೂರು : ಕೆಎಸ್ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಕೆಎಸ್ಆರ್ಟಿಸಿ’ ಎಂದು ಬಳಸಬಾರದು ಎಂದು ಕೇರಳ ರಾಜ್ಯ ಆರ್ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ತಿರುವಂಕೂರು ರಾಜ್ಯ ಸಾರಿಗೆ 1937ರಿಂದಲೇ ಇತ್ತು.
ಕೇರಳ ರಾಜ್ಯ ಉದಯವಾದ ಮೇಲೆ 1965ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು. ಕೆಎಸ್ಆರ್ಟಿಸಿ ಲೋಗೊ ಮಾಡಲಾಗಿದೆ. ಕರ್ನಾಟಕ ರಾಜ್ಯವೂ ಕೆಎಸ್ಆರ್ಟಿಸಿ ಎಂದೇ ಬಳಸುತ್ತಿದೆ ಎಂದು ಕೇರಳವು ವಿವರಣೆ ನೀಡಿತ್ತು.
ಕರ್ನಾಟಕದ ಲೋಗೊದಲ್ಲಿ ಗಂಡಭೇರುಂಡ ಗುರುತು ಬಳಕೆಗೆ ಕಾಪಿರೈಟ್ ಪಡೆಯಲಾಗಿದೆ. ಕೇರಳದ ಲೋಗೊದಲ್ಲಿ ‘ಆನೆಗಳು’ ಗುರುತು ಆಗಿದ್ದು, ಪ್ರತ್ಯೇಕ ಟ್ರೇಡ್ ಮಾರ್ಕ್ ಆಗಿದೆ ಎಂದು ಕರ್ನಾಟಕ ವಾದ ಮಂಡಿಸಿತ್ತು. ಕೇರಳದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕದ ವಾದವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…