ಬೆಂಗಳೂರು: ವಾರದ ಕೊನೆಯ ಮೂರು ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿದ್ದು, ಊರಿಗೆ ತೆರಳುವ ಪ್ರಯಾಣಿಕರಿಗಾಗಿ 2000ಕ್ಕೂ ಅಧಿಕ ಬಸ್ ವ್ಯವಸ್ಥೆಯನ್ನು ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವ ನ.2 ರಂದು ದೀಪಾವಳಿ ಮತ್ತು ನ.3 ರಂದು ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಜನರು ತಮ್ಮ ಊರಿಗೆ ಅಥವಾ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್ಆರ್ಟಿಸಿಯು ಸಾರ್ವಜನಿಕರಿಗಾಗಿ ಅಧಿಕ ಬಸ್ ವ್ಯವಸ್ಥೆಯನ್ನು ಮಾಡಿದೆ. ಅಲ್ಲದೇ, ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಒಟ್ಟು 4 ದಿನಗಳ ಕಾಲ ಬೆಂಗಳೂರಿನಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹಾಗೂ ನ.3 ಮತ್ತು ನ.4 ರಂದು ವಿವಿಧಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್ಗಳು ಸಂಚರಿಸಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಶೃಂಗೇರಿ, ಕುಂದಾಪುರ, ಹುಬ್ಬಳ್ಳಿ, ದಾವರಣಗೆರೆ, ಹೊರನಾಡು, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕಾರವಾರ, ಶಿರಸಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ಯಾದವಗಿರಿ, ವಿಜವಾಡ, ಹೈದರಾಬಾದ್ ಹಾಗೂ ತಿರುಪತಿ ಸೇರಿದಂತೆ ಇನ್ನಿತರ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಿದೆ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…