ರಾಜ್ಯ

ಕುಮಾರಸ್ವಾಮಿ ಹೆದರುವುದು ದೇವರಿಗೆ ಮತ್ತು ನಾಡಿನ ಜನರಿಗೆ ಮಾತ್ರ, ಸಿದ್ದರಾಮಯ್ಯಗೆ ಅಲ್ಲ

ನನ್ನ ಕಂಡರೆ ಕುಮಾರಸ್ವಾಮಿಗೆ ಭಯ ಎಂದ ಸಿಎಂಗೆ ತಿರುಗೇಟು ಕೊಟ್ಟ HDK

ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು ಅವರು.

ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ‌ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ‌ ಬೆಳೆಸಿರುವ ನಾಡಿನ‌ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಸಚಿವರು ತಿರುಗೇಟು ನೀಡಿದರು.

ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ‌, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವತಃ ದುಡಿಮೆ ಮೇಲೆ ಬಂದಿದ್ದೇನೆ. ಹಾಗೆ ನೋಡಿದರೆ ಸಿಎಂ ಸಿದ್ದರಾಮಯ್ಯನವರು ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು. ನನ್ನ‌ ಹೆದರಿಸುವುದಕ್ಕೆ ಆಗುತ್ತಾ? ಎಂದು ಕಿಡಿಕಾರಿದರು

ಅದು ಯಾವುದೋ ಕೇಸ್ ಹಾಕಿಕೊಂಡು ನನ್ನ ಹೆದರಿಸೋಕೆ ಆಗುತ್ತಾ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಗೆ ಬಂಧನದ ಭೀತಿ ಹೇಳುತ್ತಿದ್ದಾರೆ. ನನಗೆ ಅಂತಹ ಯಾವುದೇ ಭೀತಿಯೋ ಇಲ್ಲ” ಎಂದರು.

ನನ್ನ ಹತ್ತಿರ ಇವರದ್ದು ಏನು ನಡೆಯಲ್ಲ

ಐದು ವರ್ಷಗಳ ಕಾಲ ಸಿಎಂ ಆಗಿ‌ ಸಿದ್ದರಾಮಯ್ಯ ಇರುತ್ತಾರೆ ಎಂಬ ಡಿ.ಕೆ.ಸುರೇಶ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ. ಯಾರು ಯಾರು ಯಾವ ಹೇಳಿಕೆ ಕೊಡ್ತಾರೆ. ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ. ಇಲ್ಲಿ ಕುಮಾರಸ್ವಾಮಿ ಹತ್ತಿರ ಇವರದ್ದು, ಯಾರದ್ದು ಏನು ನಡೆಯಲ್ಲ” ಎಂದರು.

ಕಾಲವೇ ಉತ್ತರ ಕೊಡುತ್ತೆ

FIR ಮಾಡಿ ಬೆದರಿಸುವ ತಂತ್ರನಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆದರಿಕೆ ಅಲ್ಲದೆ ಇನ್ನೇನು? ಎನಿದೆ FIR ನಲ್ಲಿ?. ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನವಶ್ಯಕ. ಕಾಲವೇ ನಿರ್ಧಾರ ಮಾಡುತ್ತದೆ. ಕಾಲ ಕಾಲಕ್ಕೆ ಪ್ರತಿಯೊಂದಕ್ಕೂ ಉತ್ತರ ನೀಡುತ್ತದೆ ಎಂದು ಕಿಡಿಕಾರಿದರು.

ಭಂಡ ಸರ್ಕಾರ ಇದು

ಮುಡಾ‌ ವಿಚಾರ ಡೈವರ್ಟ್ ಮಾಡಲು FIR ಹಾಕಲಾಗಿದೀಯಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆಸಿದ ಅವರು, ಪ್ರತಿಯೊಂದು ಡೈವರ್ಟ್ ಮಾಡಲಿಕ್ಕೆ ನಡೆಯುತ್ತಿರೋದು. ಈ ಸರ್ಕಾರ ಎಲ್ಲವನ್ನೂ ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಭಂಡ ಸರ್ಕಾರ ಇದು. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವುದು ಅರ್ಥ ಇಲ್ಲ. ಅದರಿಂದ ನಾನು ಹೇಳ್ತಾ ಇರೋದು. ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಕಾಲವೇ‌ ಉತ್ತರ‌ ನೀಡುತ್ತದೆ” ಎಂದು ಸಚಿವರು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

27 seconds ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

1 hour ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

2 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

2 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

3 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

3 hours ago