ನನ್ನ ಕಂಡರೆ ಕುಮಾರಸ್ವಾಮಿಗೆ ಭಯ ಎಂದ ಸಿಎಂಗೆ ತಿರುಗೇಟು ಕೊಟ್ಟ HDK
ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು ಅವರು.
ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಹೆದರಿಸೋಕೆ ಯಾರಿಂದಲೂ ಆಗಲ್ಲ. ನಾನು ಯಾರಿಗೂ ಹೆದರಲ್ಲ. ಹೆದರೋದು ದೇವರಿಗೆ ಮತ್ತು ನಾಡಿನ ಜನರಿಗಷ್ಟೇ. ಸಿದ್ದರಾಮಯ್ಯನಂಥವರು ಲಕ್ಷ ಜನ ಬರಲಿ, ನಾನು ಹೆದರಲ್ಲ. ಹೆದರೋದು ನನ್ನ ಬೆಳೆಸಿರುವ ನಾಡಿನ ಜನಕ್ಕೆ. ಇಂತಹ ಸಿದ್ದರಾಮಯ್ಯಗೆ ನಾನು ಹೆದರುತ್ತೀನಾ? ಎಂದು ಸಚಿವರು ತಿರುಗೇಟು ನೀಡಿದರು.
ನಾನು ರಾಜಕೀಯದಲ್ಲಿ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವತಃ ದುಡಿಮೆ ಮೇಲೆ, ಕಾರ್ಯಕರ್ತರು, ಜನರ ಆಶೀರ್ವಾದದಿಂದ ಬಂದಿದ್ದೇನೆ. ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ನನ್ನ ಸ್ವತಃ ದುಡಿಮೆ ಮೇಲೆ ಬಂದಿದ್ದೇನೆ. ಹಾಗೆ ನೋಡಿದರೆ ಸಿಎಂ ಸಿದ್ದರಾಮಯ್ಯನವರು ನನ್ನ ಪಕ್ಷದ ಕಾರ್ಯಕರ್ತರು ಮತ್ತು ದೇವೇಗೌಡರ ನೆರಳಿನಲ್ಲಿ ಬಂದವರು. ನನ್ನ ಹೆದರಿಸುವುದಕ್ಕೆ ಆಗುತ್ತಾ? ಎಂದು ಕಿಡಿಕಾರಿದರು
ಅದು ಯಾವುದೋ ಕೇಸ್ ಹಾಕಿಕೊಂಡು ನನ್ನ ಹೆದರಿಸೋಕೆ ಆಗುತ್ತಾ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿಗೆ ಬಂಧನದ ಭೀತಿ ಹೇಳುತ್ತಿದ್ದಾರೆ. ನನಗೆ ಅಂತಹ ಯಾವುದೇ ಭೀತಿಯೋ ಇಲ್ಲ” ಎಂದರು.
ನನ್ನ ಹತ್ತಿರ ಇವರದ್ದು ಏನು ನಡೆಯಲ್ಲ
ಐದು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಇರುತ್ತಾರೆ ಎಂಬ ಡಿ.ಕೆ.ಸುರೇಶ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ. ಯಾರು ಯಾರು ಯಾವ ಹೇಳಿಕೆ ಕೊಡ್ತಾರೆ. ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ. ಇಲ್ಲಿ ಕುಮಾರಸ್ವಾಮಿ ಹತ್ತಿರ ಇವರದ್ದು, ಯಾರದ್ದು ಏನು ನಡೆಯಲ್ಲ” ಎಂದರು.
ಕಾಲವೇ ಉತ್ತರ ಕೊಡುತ್ತೆ
FIR ಮಾಡಿ ಬೆದರಿಸುವ ತಂತ್ರನಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆದರಿಕೆ ಅಲ್ಲದೆ ಇನ್ನೇನು? ಎನಿದೆ FIR ನಲ್ಲಿ?. ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನವಶ್ಯಕ. ಕಾಲವೇ ನಿರ್ಧಾರ ಮಾಡುತ್ತದೆ. ಕಾಲ ಕಾಲಕ್ಕೆ ಪ್ರತಿಯೊಂದಕ್ಕೂ ಉತ್ತರ ನೀಡುತ್ತದೆ ಎಂದು ಕಿಡಿಕಾರಿದರು.
ಭಂಡ ಸರ್ಕಾರ ಇದು
ಮುಡಾ ವಿಚಾರ ಡೈವರ್ಟ್ ಮಾಡಲು FIR ಹಾಕಲಾಗಿದೀಯಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆಸಿದ ಅವರು, ಪ್ರತಿಯೊಂದು ಡೈವರ್ಟ್ ಮಾಡಲಿಕ್ಕೆ ನಡೆಯುತ್ತಿರೋದು. ಈ ಸರ್ಕಾರ ಎಲ್ಲವನ್ನೂ ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಭಂಡ ಸರ್ಕಾರ ಇದು. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವುದು ಅರ್ಥ ಇಲ್ಲ. ಅದರಿಂದ ನಾನು ಹೇಳ್ತಾ ಇರೋದು. ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಕಾಲವೇ ಉತ್ತರ ನೀಡುತ್ತದೆ” ಎಂದು ಸಚಿವರು ತಿಳಿಸಿದರು.
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…