ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ವಿಚಾರವಾಗಿ ಗೃಹ ಸಚಿವರೊಂದಿಗೆ ಚರ್ಚಿಸಲು ಬಂದಿದ್ದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳಿಂದ ಮಾಹಿತಿ ಸೋರಿಕೆಯಾಗುತ್ತಿದೆ. ಅಲ್ಲದೆ ನನಗೆ ಉತ್ತಮವಾಗಿ ಗುಪ್ತಚರ ಮಾಹಿತಿ ದೊರಕುತ್ತದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಉಕ್ಕು ಮತ್ತು ಕೈಗಾರಿಕೆ ಎನ್ನುವ ಉತ್ತಮ ಖಾತೆಯನ್ನು ಕುಮಾರಸ್ವಾಮಿಗೆ ನೀಡಿದ್ದಾರೆ. ಇದರಿಂದ ಅವರಿಗೆ ಸಿಕ್ಕಿರುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಳ್ಳಲಿ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ರಾಜಕಾರಣ ಇದ್ದಿದ್ದೇ, ಯೋಗಕ್ಕಿಂತ ಯೋಗಕ್ಷೇಮ ಪ್ರಮುಖವಾಗಿದೆ. ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಮತ್ತು ಹಾಸನ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉತ್ತಮ ಕೆಲಸ ಮಾಡಲಿ ಎಂದು ಟೀಕಿಸಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…