ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ವಿಚಾರವಾಗಿ ಗೃಹ ಸಚಿವರೊಂದಿಗೆ ಚರ್ಚಿಸಲು ಬಂದಿದ್ದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳಿಂದ ಮಾಹಿತಿ ಸೋರಿಕೆಯಾಗುತ್ತಿದೆ. ಅಲ್ಲದೆ ನನಗೆ ಉತ್ತಮವಾಗಿ ಗುಪ್ತಚರ ಮಾಹಿತಿ ದೊರಕುತ್ತದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಉಕ್ಕು ಮತ್ತು ಕೈಗಾರಿಕೆ ಎನ್ನುವ ಉತ್ತಮ ಖಾತೆಯನ್ನು ಕುಮಾರಸ್ವಾಮಿಗೆ ನೀಡಿದ್ದಾರೆ. ಇದರಿಂದ ಅವರಿಗೆ ಸಿಕ್ಕಿರುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಳ್ಳಲಿ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ರಾಜಕಾರಣ ಇದ್ದಿದ್ದೇ, ಯೋಗಕ್ಕಿಂತ ಯೋಗಕ್ಷೇಮ ಪ್ರಮುಖವಾಗಿದೆ. ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಮತ್ತು ಹಾಸನ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉತ್ತಮ ಕೆಲಸ ಮಾಡಲಿ ಎಂದು ಟೀಕಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…