ರಾಜ್ಯ

ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲಿ: ಲಕ್ಷ್ಮೀ ಹೆಬ್ಬಾಳಕರ್‌

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ
ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ನಿರ್ಮಲ, ಎಚ್‌ಡಿಕೆ ಮೊದಲು ರಾಜೀನಾಮೆ ನೀಡಲಿ

6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಸಚಿವರು ಕಿಡಿಕಾರಿದರು.

ರಾಜಕೀಯ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವೂ ಕೂಡ ರಾಜಕೀಯ ಮಾಡುತ್ತಿದ್ದು, ಕಿವಿ ಮೇಲೆ ಹೂ ಇಟ್ಟುಕೊಂಡಿಲ್ಲ. ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೇಳಿದರು.

*ಸರ್ಕಾರದ ವಿರುದ್ಧ ಪ್ರಡ್ಯಂತ್ರ
ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಛೇಡಿಸಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

136 ಜನ ಕಾಂಗ್ರೆಸ್ ಶಾಸಕರಿದ್ದು, ಸರ್ಕಾರಕ್ಕೆ ಆಪತ್ತಿಲ್ಲ. ಸಿದ್ದರಾಮಯ್ಯನವರಂಥ ಧೀಮಂತ ನಾಯಕನ ನಾಯಕತ್ವ ನಮ್ಮ ಪಕ್ಷಕ್ಕಿದ್ದು, ಅವರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನದ್ದಾಗಿರುತ್ತದೆ. ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಗರು ಹಗಲುಗನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಅನುಕರಣೆ
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ ಎಂದು ಸಚಿವರು ಆರೋಪಿಸಿದರು.

ಬೇರೆ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

39 mins ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

48 mins ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

1 hour ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

2 hours ago