ರಾಜ್ಯ

ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲಿ: ಲಕ್ಷ್ಮೀ ಹೆಬ್ಬಾಳಕರ್‌

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ
ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ನಿರ್ಮಲ, ಎಚ್‌ಡಿಕೆ ಮೊದಲು ರಾಜೀನಾಮೆ ನೀಡಲಿ

6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಸಚಿವರು ಕಿಡಿಕಾರಿದರು.

ರಾಜಕೀಯ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವೂ ಕೂಡ ರಾಜಕೀಯ ಮಾಡುತ್ತಿದ್ದು, ಕಿವಿ ಮೇಲೆ ಹೂ ಇಟ್ಟುಕೊಂಡಿಲ್ಲ. ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೇಳಿದರು.

*ಸರ್ಕಾರದ ವಿರುದ್ಧ ಪ್ರಡ್ಯಂತ್ರ
ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಛೇಡಿಸಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

136 ಜನ ಕಾಂಗ್ರೆಸ್ ಶಾಸಕರಿದ್ದು, ಸರ್ಕಾರಕ್ಕೆ ಆಪತ್ತಿಲ್ಲ. ಸಿದ್ದರಾಮಯ್ಯನವರಂಥ ಧೀಮಂತ ನಾಯಕನ ನಾಯಕತ್ವ ನಮ್ಮ ಪಕ್ಷಕ್ಕಿದ್ದು, ಅವರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನದ್ದಾಗಿರುತ್ತದೆ. ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಗರು ಹಗಲುಗನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಅನುಕರಣೆ
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ ಎಂದು ಸಚಿವರು ಆರೋಪಿಸಿದರು.

ಬೇರೆ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

1 hour ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

1 hour ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

1 hour ago

ಬರದಲ್ಲೂ ಜಾನುವಾರುಗಳ ಮೇವಿಗಿಲ್ಲ ಕೊರತೆ

ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ  ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…

1 hour ago

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

2 hours ago