ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದಿರುವುದನ್ನು ರಾಜ್ಯದ ಪ್ರಮುಖ ಬಿಜೆಪಿ-ಜೆಡಿಎಸ್ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ.
ನಗರದ ಹೋಟೆಲೊಂದರಲ್ಲಿಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ನಾಯಕರು ಯತೀಂದ್ರ ಬಳಸಿರುವ ಭಾಷೆಯ ಬಗ್ಗೆ ತೀವ್ರ ಆಕ್ಷೇಪಣೆ ಎತ್ತಿದ್ದಾರೆ. ಸಂಸದ ಡಿವಿ ಸದಾನಂದಗೌಡ ಯತೀಂದ್ರರನ್ನು ಖಂಡಿಸಿದ ಬಳಿಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಯತೀಂದ್ರರನ್ನು ಗೂಂಡಾ ಎಂದಿದ್ದಾರೆ. ಕುಮಾರಸ್ವಾಮಿ ಪತ್ರಕರ್ತರೊಂದಿಗೆ ಮಾತನಾಡುವಾಗ ಮಾಧ್ಯಮ ಪ್ರತಿನಿಧಿಯೊಬ್ಬರು ಯತೀಂದ್ರ ಸಿದ್ದರಾಮಯ್ಯ ಅಮಿತ್ ಶಾರನ್ನು ಗೂಂಡಾ ಎಂದು ಕರೆದಿರುವ ಬಗ್ಗೆ ಕೇಳಿದಾಗ ಕುಮಾರಸ್ವಾಮಿ ಆಗಿದ್ರೆ ಯತೀಂದ್ರ ಏನಂತೆ? ಎಂದು ಮಾರ್ಮಿಕವಾಗಿ ಕೇಳಿದರು.
ಇದಕ್ಕೂ ಮೊದಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ತಯಾರಿಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಎರಡೂ ಪಕ್ಷಗಳ ನಾಯಕರು ಜೊತೆಗೂಡಿ ಈಗಾಗಲೇ ಪ್ರಚಾರ ಆರಂಭಿಸಲಾಗಿದೆ. ನಿನ್ನೆ ಮೈಸೂರು ಮತ್ತು ಮಂಡ್ಯದಲ್ಲಿ ವಿಜಯೇಂದ್ರ, ಸಿಎನ್ ಅಶ್ವಥ್ ನಾರಾಯಣ್, ಜಿಟಿ ದೇವೇಗೌಡ, ತಾವು ಮತ್ತು ಇತರ ನಾಯಕರ ನೇತೃತ್ವದಲ್ಲಿ ಎರಡು ಪಕ್ಷಗಳ ಸಭೆ ನಡೆಸಲಾಗಿದೆ. ಬೆಂಗಳೂರಲ್ಲಿ ಆರ್ ಅಶೋಕ್ ಅವರ ಜೊತೆ ಚಿಕ್ಕಪೇಟೆ ಶಾಸಕರ ಮನೆಯಲ್ಲಿ ಸಭೆ ಸೇರಿ ಬೆಂಗಳೂರಿನ 4 ಲೋಕಸಭಾ ಕ್ಷೇತ್ರಗಗಳಲ್ಲಿ ಪ್ರಚಾರದ ರೂಪುರೇಷಗಳನ್ನು ಚರ್ಚಿಸಲಾಗಿದೆ ಎಂದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…