ರಾಜ್ಯ

ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

“ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ; ಹಿಂದೆಯೂ ಒಮ್ಮೆ ನನ್ನ ಹೇಳಿಕೆ ದಾಖಲಿಸಿಕೊಂಡಿದ್ದರು”

ಗಂಡಾಂತರ ತಂದುಕೊಳ್ಳುವ ಕೆಲಸವನ್ನು ನಾನು ಅಧಿಕಾರದಲ್ಲಿ ಇದ್ದಾಗ ಮಾಡಿಲ್ಲ ಎಂದ ಕೇಂದ್ರ ಸಚಿವರು

ಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾದ ನಂತರ ಅಲ್ಲಿಯೇ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಬೆಳಗ್ಗೆಯಿಂದ ನೋಡುತ್ತಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜಕೀಯ ಗಂಡಾಂತರ, ಭೂ ಗಂಡಾಂತರ ಎಂದು ಚರ್ಚೆ ನಡೆಯುತ್ತಿದೆ. ಆದರೆ; ನನ್ನ ರಾಜಕೀಯ ಜೀವನದಲ್ಲಿ ಗಂಡಾಂತರ ತಂದುಕೊಳ್ಳುವ ಯಾವುದೇ ಕೆಲಸವನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವರು ನೇರ ಮಾತುಗಳಲ್ಲಿ ಹೇಳಿದರು.

ರಾಜಕೀಯ ಒತ್ತಡದಿಂದ ನನ್ನ ಮೇಲೆ ಈ ಪ್ರಕರಣವನ್ನು ಮುನ್ನೆಲೆಗೆ ತರಲಾಗಿದೆ. ಈ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ನನ್ನಿಂದ ಆದೇಶ ಆಗಿಲ್ಲ. ಒಂದು ವೇಳೆ ನಾನು ಡಿನೋಟಿಫಿಕೇಶನ್ ಮಾಡಬೇಕು ಎಂದು ಅಂದುಕೊಂಡಿದ್ದಿದ್ದರೆ ನಾನೇ ಮಾಡುತ್ತಿದ್ದೆ. ಅಷ್ಟು ಸಾಮಾನ್ಯ ತಿಳಿವಳಿಕೆ ನನ್ನ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ಇಲ್ಲ ಎಂದು ಕೇಂದ್ರ ಸಚಿವರು ತರಾಟೆಗೆ ತೆಗೆದುಕೊಂಡರು.

ಈಗಾಗಲೇ ಈ ಪ್ರಕರಣದ ಬಗ್ಗೆ ಲೋಕಾಯುಕ್ತರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಮತ್ತೆ ಹೇಳಿಕೆ ನೀಡಿದ್ದೇನೆ. ಈ ಪ್ರಕರಣದ ಬಗ್ಗೆ ನನಗೆ ಯಾವ ಆತಂಕವೂ ಇಲ್ಲ ಎಂದು ಅವರು ತಿಳಿಸಿದರು.

ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ

ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. 2015ರ ಸಿದ್ದರಾಮಯ್ಯ ಸರ್ಕಾರವಿದ್ದಾಗ ನನ್ನ ಮೇಲೆ ಹಾಕಿರುವ ಕೇಸ್ ಇದು. ಪಲಾಯನ ಮಾಡುವ ಅಗತ್ಯ ನನಗೆ ಇಲ್ಲ. ಅಂಥ ಜಾಯಮಾನ ನನ್ನದಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಯಾವ ಮುಖ ಇಟ್ಕೊಂಡು ನನ್ನ ಮುಖ್ಯಮಂತ್ರಿ ಮಾಡಿಕೊಂಡಿದ್ದರು?

ನನ್ನ ಬಗ್ಗೆ ಹೇಳಿಕೆ ಕೊಟ್ಟಿರುವ ಅಷ್ಟೂ ಮಂದಿ ಸಚಿವರು, ಶಾಸಕರು 2018ರಲ್ಲಿ ನನನ್ನು ಸಿಎಂ ಮಾಡಿದ್ದವರು. ಅಂತಹ ಆರೋಪ ನನ್ನ ಮೇಲೆ ಇದ್ದಾಗ ಕಾಂಗ್ರೆಸ್ ಪಕ್ಷ ನನ್ನ ಜತೆ ಸರಕಾರ ಮಾಡಿದ್ದೇಕೆ? ಯಾವ ಮುಖ ಇಟ್ಕೊಂಡು ನನ್ನ ಮುಖ್ಯಮಂತ್ರಿ ಮಾಡಿಕೊಂಡಿದ್ದರು ಇವರು. ಆವತ್ತು ಕುಮಾರಸ್ವಾಮಿ ಕೆಟ್ಟವರಾಗಿರಲಿಲ್ಲವೇ? ಎಂದು ಅವರು ಕಿಡಿಕಾರಿದರು.

ಬೆಳಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಅವರಿಗೂ ಉತ್ತರ ಕೊಡುತ್ತೇನೆ. ಇವತ್ತು ನನ್ನನ್ನು ಆರೋಪಿ ಸ್ಥಾನದಲ್ಲಿ ನೋಡುತ್ತಿರುವ ಸಚಿವ ಮಹಾಶಯರು ನನ್ನ ಸಂಪುಟದಲ್ಲಿಯೂ ಸಚಿವರಾಗಿದ್ದರು. ಆಗ ಇವರೆಲ್ಲರ ಪ್ರಾಮಾಣಿಕತೆ, ನೈತಿಕತೆ ಎಲ್ಲಿ ಹೋಗಿತ್ತು? ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago