ಬೆಂಗಳೂರು : ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್ಗಳಿಗೆ ತೆರಳುತ್ತಿದ್ದಾರೆ.
ಇದನ್ನು ಓದಿ: ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್
ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆದಿದೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…