Categories: ರಾಜ್ಯ

ನಿಖಿಲ್‌ ಸೋಲಿಗೆ ಅಪ್ಪ ಕುಮಾರಸ್ವಾಮಿಯವರೇ ಕಾರಣ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಪ್ಪನಿಂದಲೇ ಮಗನಿಗೆ ಸೋಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ.

ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು, ನಮ್ಮನ್ನೆಲ್ಲಾ ಗಲೀಜು ಎಂದಿದ್ದರು. ನಮ್ಮನ್ನು ಕಳೆದುಕೊಂಡು ಮಗನನ್ನು ಮೂರು ಬಾರಿ ಸೋಲಿಸಿದರು. ಕುಮಾರಸ್ವಾಮಿ ಅವರು ಆಡುವ ಮಾತು ಹಾಗೂ ನಡವಳಿಕೆಯಿಂದಲೇ ಮಗನಿಗೆ ಸೋಲಾಗಿದೆ. ನಿಖಿಲ್‌ ಸೋತಿದ್ದರೆ ಅದು ಕುಮಾರಸ್ವಾಮಿ ಅವರಿಂದ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇನ್ನಾದರೂ ಬೇರೆಯವರ ಬಗ್ಗೆ ಲಘುವಾಗಿ ಮಾತನಾಡದೇ ಕುಮಾರಸ್ವಾಮಿ ಸೌಜನ್ಯದಿಂದ ಮಾತನಾಡಬೇಕು. ಕುಮಾರಸ್ವಾಮಿ ಅವರ ನಡೆಯಿಂದ ನಿಖಿಲ್‌ ಬಲಿಪಶು ಆಗಿದ್ದಾರೆ. ಉಪಚುನಾವಣೆಯಲ್ಲಿ ನಮಗಿಂದ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಆದರೂ ಯಾಕೆ ಸೋತರೂ ಎಂದು ಪ್ರಶ್ನೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

27 mins ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

33 mins ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

42 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

54 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

1 hour ago