ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ.
ಪ್ರಯಾಗ್ರಾಜ್ನಿಂದ ಬುಧವಾರ ರಾತ್ರಿಯೇ ಆಂಬುಲೆನ್ಸ್ ಮೂಲಕ ಶವಗಳು ಹೊರಡಿದ್ದು, ಇಂದು ಬೆಳಿಗ್ಗೆ ದೆಹಲಿ ತಲುಪಿದೆ. ಮಧ್ಯಾಹ್ನ 3.30ಕ್ಕೆ ದೆಹಲಿಯಿಂದ ಹೊರಟ ವಿಮಾನ ಸಂಜೆ 5.30ಕ್ಕೆ ಬೆಳಗಾವಿಗೆ ಬರಲಿದೆ.
ಇನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ಅವರು ಶವಗಳು ಸುಗಮವಾಗಿ ನಗರಕ್ಕೆ ಬರಲು ಇಬ್ಬರು ವಿಶೇಷ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಯಾಗ್ರಾಜ್ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.
ಇನ್ನು ಪ್ರಯಾಗ್ರಾಜ್ ದುರಂತದಲ್ಲಿ ಸಿಲುಕಿರಬಹುದಾದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಧಿಕಾರಿಗಳ ತಂಡವನ್ನು ಕುಂಭಮೇಳಕ್ಕೆ ಕಳುಹಿಸಿ ಸಹಾಯವಾಣಿ ಶುರುಮಾಡಿದೆ. 080-22340676ಕ್ಕೆ ಕರೆ ಮಾಡಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಹಂಚಿಕೊಳ್ಳಬಹುದಾಗಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…
ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…