ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ.
ಪ್ರಯಾಗ್ರಾಜ್ನಿಂದ ಬುಧವಾರ ರಾತ್ರಿಯೇ ಆಂಬುಲೆನ್ಸ್ ಮೂಲಕ ಶವಗಳು ಹೊರಡಿದ್ದು, ಇಂದು ಬೆಳಿಗ್ಗೆ ದೆಹಲಿ ತಲುಪಿದೆ. ಮಧ್ಯಾಹ್ನ 3.30ಕ್ಕೆ ದೆಹಲಿಯಿಂದ ಹೊರಟ ವಿಮಾನ ಸಂಜೆ 5.30ಕ್ಕೆ ಬೆಳಗಾವಿಗೆ ಬರಲಿದೆ.
ಇನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ಅವರು ಶವಗಳು ಸುಗಮವಾಗಿ ನಗರಕ್ಕೆ ಬರಲು ಇಬ್ಬರು ವಿಶೇಷ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಯಾಗ್ರಾಜ್ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.
ಇನ್ನು ಪ್ರಯಾಗ್ರಾಜ್ ದುರಂತದಲ್ಲಿ ಸಿಲುಕಿರಬಹುದಾದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಧಿಕಾರಿಗಳ ತಂಡವನ್ನು ಕುಂಭಮೇಳಕ್ಕೆ ಕಳುಹಿಸಿ ಸಹಾಯವಾಣಿ ಶುರುಮಾಡಿದೆ. 080-22340676ಕ್ಕೆ ಕರೆ ಮಾಡಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಹಂಚಿಕೊಳ್ಳಬಹುದಾಗಿದೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…