ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರಿದಿದೆ.
ನಿನ್ನೆ ಬೆಳಿಗ್ಗೆ ಕೂಡ ಗಂಡು ಚೀತಾ ಪವನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇದರೊಂದಿಗೆ ಮಾರ್ಚ್ 2023ರಿಂದ ಸಾವನ್ನಪ್ಪಿದ ಎಂಟನೇ ಆಫ್ರಿಕನ್ ಚಿರತೆಯಾಗಿದೆ.
ರಾಜ್ಯ ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ ನಿನ್ನೆ ಬೆಳಿಗ್ಗೆ ನಮೀಬಿಯಾದ ಗಂಡು ಚಿರತೆ ಯಾವುದೇ ಚಲನವಲನವಿಲ್ಲದೇ ಪೊದೆಗಳ ನಡುವೆ ನಾಲಾ ಅಂಚಿನಲ್ಲಿ ಬಿದ್ದಿರುವುದು ಕಂಡು ಬಂದಿತ್ತು. ಭಾರೀ ಮಳೆಯಿಂದ ನಾಲೆ ತುಂಬಿ ಹರಿಯುತ್ತಿತ್ತು.
ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಿ ಪರಿಶೀಲಿಸಿದಾಗ ತಲೆ ಸೇರಿದಂತೆ ದೇಹದ ಮುಂಭಾಗದ ಅರ್ಧ ಭಾಗವು ನೀರಿನೊಳಗೆ ಇರುವುದು ಕಂಡುಬಂದಿದೆ. ದೇಹದ ಮೇಲೆ ಎಲ್ಲಿಯೂ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಚೀತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…