ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದೆ.
ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆಗೆ ಮಾಡುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ನೀಡಬೇಕೆಂದು ಸರ್ಕಾರ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಸೂಚನೆ ನೀಡಿತು.
ಇದರನ್ವಯ ರಾಜ್ಯಾದ್ಯಂತ ಕುರುಬ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ, ಮೌಲ್ಯಮಾಪನ, ಆರ್ಥಿಕ ಸ್ಥಿತಿಗತಿ ಸೇರಿದಂತೆ ಹತ್ತು ಹಲವು ಆಯಾಮಗಳಲ್ಲಿ ಅಧ್ಯಯನ ನಡೆಸಿರುವ ಸಂಸ್ಥೆ ಸರ್ಕಾರಕ್ಕೆ ಮುಚ್ಚಿದ ಲಕೋಟಿಯಲ್ಲಿ ವರದಿಯನ್ನು ಸಲ್ಲಿಸಿದೆ.
ವರದಿಯ ಪ್ರಕಾರ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡಲು ಯಾವುದೇ ಅಡ್ಡಿ ಇಲ್ಲ .ಇದರಿಂದ ಆ ಸಮುದಾಯದ ಮೀಸಲಾತಿಗೆ ಯಾವುದೇ ಕಾನೂನಿನ ತೊಡಕಾಗುವುದಿಲ್ಲ ಎಂದು ಹೇಳಿದೆ.
ಇದನ್ನೂ ಓದಿ:-ಮಂಡ್ಯ | ಜಮೀನುಗಳಿಗೆ ನುಗ್ಗಿದ ನೀರು: ಬೆಳೆ ನಷ್ಟದ ಆತಂಕದಲ್ಲಿ ರೈತರು
ಪರಿಶಿಷ್ಟ ಪಂಗಡಕ್ಕೆ ಪ್ರಸ್ತುತ ಶೇ.೭ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ಒಂದು ವೇಳೆ ಈ ಪಟ್ಟಿ ವ್ಯಾಪ್ತಿಗೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಿದರೆ ಮೀಸಲಾತಿ ಪ್ರಮಾಣವನ್ನು ಶೇ.೭ರಿಂದ ೯ಕ್ಕೆ ಹೆಚ್ಚಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವಂತೆಯೂ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಯಾವುದೇ ಸಮುದಾಯವನ್ನು ಇನ್ನೊಂದು ಸಮುದಾಯದ ಜಾತಿಪಟ್ಟಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಈ ಹಿಂದೆ ಮೈಸೂರು, ಚಾಮರಾಜನಗರ ಮತ್ತಿತರ ಕಡೆ ವಾಸವಾಗಿರುವ ತಳವಾರ ಮತ್ತು ಪರಿವಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಕೇಂದ್ರ ಸರ್ಕಾರ ಸೇರ್ಪಡೆ ಮಾಡಿತ್ತು.
ಈಗ ಅದರನ್ವಯ ರಾಜ್ಯ ಸರ್ಕಾರವು ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಕ್ರಮ ತೆಗೆದುಕೊಳ್ಳಬಹುದೆಂದು ವರದಿ ಹೇಳಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…