ಬೆಂಗಳೂರು: ಪಂಜಾಬ್ನ ಪಟಿಯಾಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್ ಅವರನ್ನು ಪಟಿಯಾಲದ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಏರ್ಲಿಫ್ಟ್ ಮಾಡಲು ಕೇಂದ್ರ ಸಚಿವ ವಿ.ಸೋಮಣ್ಣ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಅವರ ಬೆನ್ನುಮೂಳೆಗೆ ತೀವ್ರ ಗಾಯಗಳಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಏರ್ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದಾರೆ. ಈ ಸಂಬಂಧ ಸೋಮಣ್ಣ ಅವರು ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುರುಬೂರು ಶಾಂತಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…