ಬಳ್ಳಾರಿ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಬಿದ್ದ ಅವಘಡಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ತುಂಗಭದ್ರಾ ಗೇಟ್ ಮುರಿದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು. ಇದರ ಜೊತೆಗೆ ನೀರಾವರಿ ಸಚಿವರಾದ ಡಿಕೆಶಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಲಾಶಯದ ಗೇಟ್ ಮುರಿದು ನೀರು ಖಾಲಿಯಾಗುತ್ತಿದೆ. ಇದರಿಂದ ರೈತರ ಬದುಕು ಹಸನಾಗುವ ಬದಲು ಹಾಳಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಕಳೆದ ಒಂದು ತಿಂಗಳಿನಿಂದಲೂ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದೆಲ್ಲಾ ಪರಿಸ್ಥಿತಿಗಳನ್ನು ಅವಲೋಕಿಸಿ ರಾಜ್ಯ ಸರ್ಕಾರ ಜಲಾಶಯಗಳ ಭದ್ರತೆ ಹಾಗೂ ಪ್ರವಾಹ ಹಾನಿ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿತ್ತು. ಇದನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಬೇಜಾವಾಬ್ದಾರಿ ವಹಿಸಿದ್ದಾರೆ ಎಂದು ಕಿಡಿಕಾರಿದರು.
ಡಿಕೆಶಿ ಬೇಜಾವಾಬ್ದಾರಿಯಿಂದಲೇ ಈ ಘಟನೆ ನಡೆದಿದೆ. ಆದ್ದರಿಂದ ಸಚಿವ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…