ರಾಜ್ಯ

ರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಸಚಿವ ಕೆ.ಜೆ.ಜಾರ್ಜ್

ಕೋಲಾರ: ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಇಂದು (ಆ.30) ಸಭೆ ನಡೆಸಿದ ಸಚಿವರು, “ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ. 30 ಮತ್ತು ರಾಜ್ಯ ಸರ್ಕಾರದಿಂದ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ. 20ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು. ರಾಜ್ಯ ಸರ್ಕಾರ ಸಬ್ಸಿಡಿ ಹೆಚ್ಚಿಸಿರುವುದರಿಂದಲೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಯೋಜನೆಗೆ ನೋಂದಾಯಿಸಿದ್ದಾರೆ” ಎಂದರು.

“ಅದೇ ರೀತಿ ಕುಸುಮ್ ಸಿ ಫೀಡರ್ ಸೋಲಾರೈಸೇಶನ್ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ ಸಮೀಪದ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸಲಾಗುತ್ತದೆ. ಆಯಾ ಸಬ್ ಸ್ಟೇಷನ್ ವ್ಯಾಪ್ತಿಯಲ್ಲೇ ಆ ವಿದ್ಯುತ್ ಪೂರೈಕೆಯಾಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುವುದು. ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಮೀನು ಬೇಕಿದ್ದು, ಖಾಸಗಿ ಭೂಮಿಗೆ ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ. ನೀಡಲಾಗುತ್ತದೆ. ಸರ್ಕಾರಿ ಭೂಮಿಯಾದರೆ ಇಂಧನ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಬಳಿ ಪ್ರತಿ ಎಕರೆಗೆ 25 ಸಾವಿರ ರು. ಠೇವಣಿ ಇಟ್ಟು ಆ ಮೊತ್ತವನ್ನು ಆ ಭಾಗದ ಅಂಗನವಾಡಿ, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವೆಚ್ಚ ಮಾಡಲಾಗುವುದು,” ಎಂದು ತಿಳಿಸಿದರು.

“ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಅದರ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ಸಬ್ ಸ್ಟೇಷನ್ ಗಳ ನಿರ್ಮಾಣ, ಟ್ರಾನ್ಸ್ ಫಾರಂಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ವಿದ್ಯುತ್ ಅಗತ್ಯವಿದ್ದರೆ ವಿದ್ಯುತ್ ಖರೀದಿ ಬದಲು ಇತರೆ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಂಡು ಇಲಾಖೆಗೆ ಹೊರೆಯಾದಗದಂತೆ ನೋಡಿಕೊಳ್ಳಲಾಗುತ್ತಿದೆ,” ಎಂದು ಹೇಳಿದರು.

“ಜಿಲ್ಲೆಯ ಅಂಚಿನಲ್ಲಿ ಇರುವ ಕೆಲವು ಗ್ರಾಮಗಳಲ್ಲಿ ಅವಿರತ ವಿದ್ಯುತ್ ಸಂಪರ್ಕ ಒದಗಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳಾದ ಪವನ ವಿದ್ಯುತ್ ಅಥವಾ ಸೌರ ವಿದ್ಯುತ್ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳಲಾಗುವುದು,” ಎಂದು ಸಚಿವರು ತಿಳಿಸಿದರು.

“ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಗೆ ಅಷ್ಟೊಂದು ಬೇಡಿಕೆ ಇಲ್ಲ. ಇದರ ಹೊರತಾಗಿಯೂ ಸೂರ್ಯ ಘರ್ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನ ಜಾಗೃತಿ ಮೂಡಿಸಲಾಗುವುದು” ಎಂದು ಸಚಿವರು ಮಾಹಿತಿ ನೀಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಸಂರ್ಕದಲ್ಲಿರಬೇಕು: ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, “ಜನತೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರೊಂದಿಗೆ ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರಿಗೆ ಸಮಸ್ಯೆಯ ಬಗ್ಗೆ ಅರಿವಿರುತ್ತದೆ. ಆದ್ದರಿಂದ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯ ಶಾಸಕರ ಜತೆ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು,” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರೂ ಆಗಿರುವ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಾಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೇರಿದಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

1 hour ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

7 hours ago