ರಾಜ್ಯ

ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಕುವೆಂಪು : ಹೆಚ್‌.ಸಿ.ಮಹದೇವಪ್ಪ

ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ ಮತ ವಿಶ್ವಪಥ ಎಂಬ ಮಹತ್ವದ ತಿಳುವಳಿಕೆಯನ್ನು ನಮ್ಮೆಲ್ಲರಿಗೂ ನೀಡಿದ ರಾಷ್ಟ್ರಕವಿ ಕುವೆಂಪು ಅವರು ಕೆಳವರ್ಗಗಳು ಸಾಕ್ಷರತೆ ಹೊಂದಿ, ಪ್ರಜ್ಞಾವಂತರಾಗಿ ಮೌಡ್ಯತೆ ಹಾಗೂ ಕಂದಾಚಾರಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕೆಂದು ಬಯಸಿದ್ದರು.

ಮಹಿಳಾ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದ ಕುವೆಂಪು ಅವರು ತಮ್ಮೆಲ್ಲಾ ಕೃತಿಗಳಲ್ಲಿ ಸಮಾನ ಹಕ್ಕುಗಳ ಜೊತೆಗೆ ನಿಸರ್ಗದ ಮಹತ್ವವನ್ನೂ ಕೂಡಾ ಪ್ರತಿಪಾದಿಸಿದ್ದಾರೆ. ಇನ್ನು ಯುವ ಸಮುದಾಯದಲ್ಲಿ ಅತ್ಯಂತ ನಂಬಿಕೆ ಇಟ್ಟುಕೊಂಡಿದ್ದ ಕುವೆಂಪು ಅವರು ಸಾಹಿತ್ಯದ ಮೂಲಕ ಮೊದಲ ಬಾರಿಗೆ ಅವರಿಗೆ ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಓರ್ವ ದಾರ್ಶನಿಕ ವ್ಯಕ್ತಿ.

ಇನ್ನು ತಮ್ಮ ಮಹಾಛಂದಸ್ಸಿನ ಮೂಲಕ ‘ರಾಮಾಯಣ ದರ್ಶನಂ’ ಕೃತಿಯನ್ನು ಬರೆದು, ಶೂದ್ರ ವರ್ಗಗಳೂ ಕೂಡಾ ಯಾವುದಕ್ಕೂ ಕಡಿಮೆ ಇಲ್ಲ ಎನ್ನುವುದನ್ನು ಸಾಧಿಸಿ ತೋರಿಸಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಸ್ಪರ್ಶವನ್ನು ನೀಡಿದಂತವರು.

ಇನ್ನು ನಮ್ಮ ಮೈಸೂರಿನ ನೆಲದಲ್ಲಿ ಇದ್ದು ಸಾಕಷ್ಟು ಬರಹ ಕೃಷಿ ಮಾಡಿದ ಈ ಉದಯರವಿ, ಬಹುದೊಡ್ಡ ವಿದ್ಯಾರ್ಥಿ ಪರಂಪರೆಯನ್ನು ಬೆಳೆಸಿ ಹೋಗಿದ್ದಾರೆ ಎಂಬುದುನ್ನು ಮನದುಂಬಿ ನೆನೆಯುತ್ತೇನೆ.

ಜಗದ ಕವಿ ಯುಗದ ಕವಿ ಎಂದೇ ಹೆಸರಾದ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಮೊದಲಿಗೆ ತಮ್ಮೆಲ್ಲರಿಗೂ ವಿಶ್ವ ಮಾನವ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ, ಕುವೆಂಪು ಅವರು ಹೇಳಿಕ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ನಮ್ಮ ವ್ಯಕ್ತಿತ್ವದಲ್ಲಿ ರೂಪಿಸಿಕೊಂಡು ಸಮಾಜವನ್ನು ಮೌಡ್ಯ ರಹಿತವಾಗಿ ಮತ್ತು ಸಮಾನತೆಯ ನೆಲೆಯಲ್ಲಿ ಆರೋಗ್ಯಕರವಾಗಿ ಕಟ್ಟೋಣ ಎಂದು ಈ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುತ್ತೇನೆ ಎಂದರು.

 

andolanait

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

9 mins ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

23 mins ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

36 mins ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

54 mins ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

1 hour ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

2 hours ago