ರಾಜ್ಯ

ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಕುವೆಂಪು : ಹೆಚ್‌.ಸಿ.ಮಹದೇವಪ್ಪ

ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ ಮತ ವಿಶ್ವಪಥ ಎಂಬ ಮಹತ್ವದ ತಿಳುವಳಿಕೆಯನ್ನು ನಮ್ಮೆಲ್ಲರಿಗೂ ನೀಡಿದ ರಾಷ್ಟ್ರಕವಿ ಕುವೆಂಪು ಅವರು ಕೆಳವರ್ಗಗಳು ಸಾಕ್ಷರತೆ ಹೊಂದಿ, ಪ್ರಜ್ಞಾವಂತರಾಗಿ ಮೌಡ್ಯತೆ ಹಾಗೂ ಕಂದಾಚಾರಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕೆಂದು ಬಯಸಿದ್ದರು.

ಮಹಿಳಾ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದ ಕುವೆಂಪು ಅವರು ತಮ್ಮೆಲ್ಲಾ ಕೃತಿಗಳಲ್ಲಿ ಸಮಾನ ಹಕ್ಕುಗಳ ಜೊತೆಗೆ ನಿಸರ್ಗದ ಮಹತ್ವವನ್ನೂ ಕೂಡಾ ಪ್ರತಿಪಾದಿಸಿದ್ದಾರೆ. ಇನ್ನು ಯುವ ಸಮುದಾಯದಲ್ಲಿ ಅತ್ಯಂತ ನಂಬಿಕೆ ಇಟ್ಟುಕೊಂಡಿದ್ದ ಕುವೆಂಪು ಅವರು ಸಾಹಿತ್ಯದ ಮೂಲಕ ಮೊದಲ ಬಾರಿಗೆ ಅವರಿಗೆ ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಓರ್ವ ದಾರ್ಶನಿಕ ವ್ಯಕ್ತಿ.

ಇನ್ನು ತಮ್ಮ ಮಹಾಛಂದಸ್ಸಿನ ಮೂಲಕ ‘ರಾಮಾಯಣ ದರ್ಶನಂ’ ಕೃತಿಯನ್ನು ಬರೆದು, ಶೂದ್ರ ವರ್ಗಗಳೂ ಕೂಡಾ ಯಾವುದಕ್ಕೂ ಕಡಿಮೆ ಇಲ್ಲ ಎನ್ನುವುದನ್ನು ಸಾಧಿಸಿ ತೋರಿಸಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಸ್ಪರ್ಶವನ್ನು ನೀಡಿದಂತವರು.

ಇನ್ನು ನಮ್ಮ ಮೈಸೂರಿನ ನೆಲದಲ್ಲಿ ಇದ್ದು ಸಾಕಷ್ಟು ಬರಹ ಕೃಷಿ ಮಾಡಿದ ಈ ಉದಯರವಿ, ಬಹುದೊಡ್ಡ ವಿದ್ಯಾರ್ಥಿ ಪರಂಪರೆಯನ್ನು ಬೆಳೆಸಿ ಹೋಗಿದ್ದಾರೆ ಎಂಬುದುನ್ನು ಮನದುಂಬಿ ನೆನೆಯುತ್ತೇನೆ.

ಜಗದ ಕವಿ ಯುಗದ ಕವಿ ಎಂದೇ ಹೆಸರಾದ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಮೊದಲಿಗೆ ತಮ್ಮೆಲ್ಲರಿಗೂ ವಿಶ್ವ ಮಾನವ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ, ಕುವೆಂಪು ಅವರು ಹೇಳಿಕ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ನಮ್ಮ ವ್ಯಕ್ತಿತ್ವದಲ್ಲಿ ರೂಪಿಸಿಕೊಂಡು ಸಮಾಜವನ್ನು ಮೌಡ್ಯ ರಹಿತವಾಗಿ ಮತ್ತು ಸಮಾನತೆಯ ನೆಲೆಯಲ್ಲಿ ಆರೋಗ್ಯಕರವಾಗಿ ಕಟ್ಟೋಣ ಎಂದು ಈ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುತ್ತೇನೆ ಎಂದರು.

 

andolanait

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

2 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

2 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

2 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

2 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

2 hours ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

2 hours ago