ರಾಜ್ಯ

ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಕುವೆಂಪು : ಹೆಚ್‌.ಸಿ.ಮಹದೇವಪ್ಪ

ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ ಮತ ವಿಶ್ವಪಥ ಎಂಬ ಮಹತ್ವದ ತಿಳುವಳಿಕೆಯನ್ನು ನಮ್ಮೆಲ್ಲರಿಗೂ ನೀಡಿದ ರಾಷ್ಟ್ರಕವಿ ಕುವೆಂಪು ಅವರು ಕೆಳವರ್ಗಗಳು ಸಾಕ್ಷರತೆ ಹೊಂದಿ, ಪ್ರಜ್ಞಾವಂತರಾಗಿ ಮೌಡ್ಯತೆ ಹಾಗೂ ಕಂದಾಚಾರಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕೆಂದು ಬಯಸಿದ್ದರು.

ಮಹಿಳಾ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದ ಕುವೆಂಪು ಅವರು ತಮ್ಮೆಲ್ಲಾ ಕೃತಿಗಳಲ್ಲಿ ಸಮಾನ ಹಕ್ಕುಗಳ ಜೊತೆಗೆ ನಿಸರ್ಗದ ಮಹತ್ವವನ್ನೂ ಕೂಡಾ ಪ್ರತಿಪಾದಿಸಿದ್ದಾರೆ. ಇನ್ನು ಯುವ ಸಮುದಾಯದಲ್ಲಿ ಅತ್ಯಂತ ನಂಬಿಕೆ ಇಟ್ಟುಕೊಂಡಿದ್ದ ಕುವೆಂಪು ಅವರು ಸಾಹಿತ್ಯದ ಮೂಲಕ ಮೊದಲ ಬಾರಿಗೆ ಅವರಿಗೆ ವಿಚಾರ ಕ್ರಾಂತಿಗೆ ಆಹ್ವಾನ ನೀಡಿದ ಓರ್ವ ದಾರ್ಶನಿಕ ವ್ಯಕ್ತಿ.

ಇನ್ನು ತಮ್ಮ ಮಹಾಛಂದಸ್ಸಿನ ಮೂಲಕ ‘ರಾಮಾಯಣ ದರ್ಶನಂ’ ಕೃತಿಯನ್ನು ಬರೆದು, ಶೂದ್ರ ವರ್ಗಗಳೂ ಕೂಡಾ ಯಾವುದಕ್ಕೂ ಕಡಿಮೆ ಇಲ್ಲ ಎನ್ನುವುದನ್ನು ಸಾಧಿಸಿ ತೋರಿಸಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಸ್ಪರ್ಶವನ್ನು ನೀಡಿದಂತವರು.

ಇನ್ನು ನಮ್ಮ ಮೈಸೂರಿನ ನೆಲದಲ್ಲಿ ಇದ್ದು ಸಾಕಷ್ಟು ಬರಹ ಕೃಷಿ ಮಾಡಿದ ಈ ಉದಯರವಿ, ಬಹುದೊಡ್ಡ ವಿದ್ಯಾರ್ಥಿ ಪರಂಪರೆಯನ್ನು ಬೆಳೆಸಿ ಹೋಗಿದ್ದಾರೆ ಎಂಬುದುನ್ನು ಮನದುಂಬಿ ನೆನೆಯುತ್ತೇನೆ.

ಜಗದ ಕವಿ ಯುಗದ ಕವಿ ಎಂದೇ ಹೆಸರಾದ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಮೊದಲಿಗೆ ತಮ್ಮೆಲ್ಲರಿಗೂ ವಿಶ್ವ ಮಾನವ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ, ಕುವೆಂಪು ಅವರು ಹೇಳಿಕ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ನಮ್ಮ ವ್ಯಕ್ತಿತ್ವದಲ್ಲಿ ರೂಪಿಸಿಕೊಂಡು ಸಮಾಜವನ್ನು ಮೌಡ್ಯ ರಹಿತವಾಗಿ ಮತ್ತು ಸಮಾನತೆಯ ನೆಲೆಯಲ್ಲಿ ಆರೋಗ್ಯಕರವಾಗಿ ಕಟ್ಟೋಣ ಎಂದು ಈ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುತ್ತೇನೆ ಎಂದರು.

 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago