Labour Minister Santosh Lad Meets Trade Union Leader and Former MLA Michael V. Fernandes
ಬೆಂಗಳೂರು : ಇತ್ತೀಚಿಗೆ ಅಪಘಾತಕೀಡಾಗಿಡ್ಡ ಕಾರಣ ವಿಶ್ರಾಂತಿ ಪಡೆದು ಆರೋಗ್ಯ ಚೇತರಿಸಿಕೊಳ್ಳುತ್ತಿರುವ ಕಾರ್ಮಿಕ ಮುಖಂಡ ಮಾಜಿ ಶಾಸಕ ಮೈಕೆಲ್ ವಿ ಫರ್ನಾಂಡಿಸ್ ಅವರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ನಿವಾಸದಲ್ಲಿ ಸಂಜೆ ಮೈಖಲ್ ಅವರನ್ನು ಭೇಟಿ ಮಾಡಿದ ಸಂತೋಷ್ ಲಾಡ್, ಕಾರ್ಮಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ಕಾರ್ಮಿಕರ ಏಳಿಗೆಗೆಗಾಗಿ ಶ್ರಮಿಸಿದ್ದ ಮೈಕೆಲ್ ಅವರ ಸೇವೆಯನ್ನು ಸ್ಮರಿಸಿ ಕಾರ್ಮಿಕರ ಆಗುಹೋಗುಗಳ ಬಗ್ಗೆ ಚರ್ಚಿಸಿ, ಮೈಖಲ್ ಅವರನ್ನು ಬೇಗ ಗುಣಮುಖರಾಗುವಂತೆ ಹಾರೈಸಿದ ಸಚಿವ ಲಾಡ್, ಕಾರ್ಮಿಕರ ಏಳಿಗೆಗಾಗಿ ಇಲಾಖೆ ತಂದಿರುವ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.
ಇನ್ನು ಮೈಖಲ್ ಅವರು ಕಳೆದ 60 ವರ್ಷಗಳಿಂದ ಕಾರ್ಮಿಕ ಸಂಘಟನೆಯಲ್ಲಿ ಹಲವಾರು ಸಾರ್ವಜನಿಕ ಉದ್ದಿಮೆಗಳ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರ್ಮಿಕ ಇಲಾಖೆ ಸಚಿವರಾಗಿ ಕಾರ್ಮಿಕರಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದಕ್ಕೆ ಹಿರಿಯರಾದ ಮೈಕೆಲ್ ಅವರು ಸಂತೋಷ್ ಲಾಡ್ ಅವರ ಸೇವಾಕಾರ್ಯವನ್ನು ಮೆಚ್ಚಿ ಹರ್ಷ ವ್ಯಕ್ತಪಡಿಸಿ ಆಶೀರ್ವದಿಸಿದರು.
ಭೇಟಿ ಸಂದರ್ಭದಲ್ಲಿ ಫೆರ್ನಾಂಡಿಸ್ ಅವರ ಪತ್ನಿ ಡೂನ ಫೆರ್ನಾಂಡಿಸ್, ಲಾಡ್ ಅವರ ಸಹೋದರ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ಮಯೂರ್ ಮೋರೆ, ಸಂಘಟನಾಕಾರದ ಲಕ್ಷ್ಮಯ್ಯ ಕಾಳಪ್ಪ ಸೇರಿದಂತೆ ಇತರರು ಭೇಟಿ ಸಂದರ್ಭದಲ್ಲಿ ಜೊತೆಗಿದ್ದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…